ಉಡುಪಿ : ಕರಾವಳಿಯಾದ್ಯಂತ ಇಂದು ತೆರೆಗೆ ಸಿದ್ದವಾಗಿರುವ “ಪಿಲಿ” ತುಳು ಚಿತ್ರ ಥಿಯೇಟರ್ಗಳಲ್ಲಿ ಪ್ರದರ್ಶನ ಕಾಣದಂತೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ.
ಈ ಚಿತ್ರಕ್ಕೆ 40 ಲಕ್ಷ ಬಂಡವಾಳ ಹೂಡಿದ ನಿರ್ಮಾಪಕ ಮಂಜೀತ್ ನಾಗರಾಜ್ ಅವರನ್ನು ಕಡೆಗಣಿಸಿ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈ ಚಿತ್ರ ಪ್ರದರ್ಶನ ಕಾಣದಂತೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ನಿರ್ಮಾಪಕ ಮಂದೀಪ್ ಅವರ ಮನವಿ ಪುರಸ್ಕರಿಸಿದ ನ್ಯಾಯಾಲಯವು ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭರತ್ ಭಂಡಾರಿ ಅವರು ಚಿತ್ರದ ನಿರ್ಮಾಣಕ್ಕಾಗಿ ನನ್ನಿಂದ 40 ಲಕ್ಷ ಬಂಡವಾಳ ಪಡೆದು ಮೊದಲ ಹಂತದ ಚಿತ್ರೀಕರಣ ಮುಗಿದ ಬಳಿಕ ಹಣ ಪಡೆದು ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಆದರೀಗ ಬೇರೆ ಯಾವುದೋ ನಿರ್ಮಾಪಕರ ಹೆಸರು ಹಾಕಿಕೊಂಡು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ನನಗೂ ಹಾಗೂ ಹಣ ನೀಡಿದ ಇತರ ಸಹನಿರ್ಮಾಪಕರಿಗೂ ವಂಚಿಸಿದ್ದಾರೆ” ಎಂದು ನಿರ್ಮಾಪಕ ಮಂಜೀತ್ ನಾಗರಾಜ್ ಅವರು ಆರೋಪಿಸಿದ್ದಾರೆ.
‘ಪಿಲಿ’ ಚಿತ್ರ ಪ್ರದರ್ಶನ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಾಗಿ ಅವರು ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…