ಉಡುಪಿ : ಕರಾವಳಿಯಾದ್ಯಂತ ಇಂದು ತೆರೆಗೆ ಸಿದ್ದವಾಗಿರುವ “ಪಿಲಿ” ತುಳು ಚಿತ್ರ ಥಿಯೇಟರ್ಗಳಲ್ಲಿ ಪ್ರದರ್ಶನ ಕಾಣದಂತೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ.
ಈ ಚಿತ್ರಕ್ಕೆ 40 ಲಕ್ಷ ಬಂಡವಾಳ ಹೂಡಿದ ನಿರ್ಮಾಪಕ ಮಂಜೀತ್ ನಾಗರಾಜ್ ಅವರನ್ನು ಕಡೆಗಣಿಸಿ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈ ಚಿತ್ರ ಪ್ರದರ್ಶನ ಕಾಣದಂತೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ನಿರ್ಮಾಪಕ ಮಂದೀಪ್ ಅವರ ಮನವಿ ಪುರಸ್ಕರಿಸಿದ ನ್ಯಾಯಾಲಯವು ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭರತ್ ಭಂಡಾರಿ ಅವರು ಚಿತ್ರದ ನಿರ್ಮಾಣಕ್ಕಾಗಿ ನನ್ನಿಂದ 40 ಲಕ್ಷ ಬಂಡವಾಳ ಪಡೆದು ಮೊದಲ ಹಂತದ ಚಿತ್ರೀಕರಣ ಮುಗಿದ ಬಳಿಕ ಹಣ ಪಡೆದು ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಆದರೀಗ ಬೇರೆ ಯಾವುದೋ ನಿರ್ಮಾಪಕರ ಹೆಸರು ಹಾಕಿಕೊಂಡು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ನನಗೂ ಹಾಗೂ ಹಣ ನೀಡಿದ ಇತರ ಸಹನಿರ್ಮಾಪಕರಿಗೂ ವಂಚಿಸಿದ್ದಾರೆ” ಎಂದು ನಿರ್ಮಾಪಕ ಮಂಜೀತ್ ನಾಗರಾಜ್ ಅವರು ಆರೋಪಿಸಿದ್ದಾರೆ.
‘ಪಿಲಿ’ ಚಿತ್ರ ಪ್ರದರ್ಶನ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಾಗಿ ಅವರು ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…