ಉಡುಪಿ : ಕರಾವಳಿಯಾದ್ಯಂತ ಇಂದು ತೆರೆಗೆ ಸಿದ್ದವಾಗಿರುವ “ಪಿಲಿ” ತುಳು ಚಿತ್ರ ಥಿಯೇಟರ್ಗಳಲ್ಲಿ ಪ್ರದರ್ಶನ ಕಾಣದಂತೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ.
ಈ ಚಿತ್ರಕ್ಕೆ 40 ಲಕ್ಷ ಬಂಡವಾಳ ಹೂಡಿದ ನಿರ್ಮಾಪಕ ಮಂಜೀತ್ ನಾಗರಾಜ್ ಅವರನ್ನು ಕಡೆಗಣಿಸಿ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈ ಚಿತ್ರ ಪ್ರದರ್ಶನ ಕಾಣದಂತೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ನಿರ್ಮಾಪಕ ಮಂದೀಪ್ ಅವರ ಮನವಿ ಪುರಸ್ಕರಿಸಿದ ನ್ಯಾಯಾಲಯವು ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭರತ್ ಭಂಡಾರಿ ಅವರು ಚಿತ್ರದ ನಿರ್ಮಾಣಕ್ಕಾಗಿ ನನ್ನಿಂದ 40 ಲಕ್ಷ ಬಂಡವಾಳ ಪಡೆದು ಮೊದಲ ಹಂತದ ಚಿತ್ರೀಕರಣ ಮುಗಿದ ಬಳಿಕ ಹಣ ಪಡೆದು ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಆದರೀಗ ಬೇರೆ ಯಾವುದೋ ನಿರ್ಮಾಪಕರ ಹೆಸರು ಹಾಕಿಕೊಂಡು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ನನಗೂ ಹಾಗೂ ಹಣ ನೀಡಿದ ಇತರ ಸಹನಿರ್ಮಾಪಕರಿಗೂ ವಂಚಿಸಿದ್ದಾರೆ” ಎಂದು ನಿರ್ಮಾಪಕ ಮಂಜೀತ್ ನಾಗರಾಜ್ ಅವರು ಆರೋಪಿಸಿದ್ದಾರೆ.
‘ಪಿಲಿ’ ಚಿತ್ರ ಪ್ರದರ್ಶನ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಾಗಿ ಅವರು ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…