Featured

ಇಂದು ಬಿಡುಗಡೆಗೆ ಸಿದ್ದವಾಗಿದ್ದ ‘ಪಿಲಿ’ ತುಳುಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ – Vishwanews24

ಇಂದು ಬಿಡುಗಡೆಗೆ ಸಿದ್ದವಾಗಿದ್ದ ‘ಪಿಲಿ’ ತುಳುಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ

ಉಡುಪಿ : ಕರಾವಳಿಯಾದ್ಯಂತ ಇಂದು ತೆರೆಗೆ ಸಿದ್ದವಾಗಿರುವ “ಪಿಲಿ” ತುಳು ಚಿತ್ರ ಥಿಯೇಟರ್‍ಗಳಲ್ಲಿ ಪ್ರದರ್ಶನ ಕಾಣದಂತೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ.

ಈ ಚಿತ್ರಕ್ಕೆ 40 ಲಕ್ಷ ಬಂಡವಾಳ ಹೂಡಿದ ನಿರ್ಮಾಪಕ ಮಂಜೀತ್ ನಾಗರಾಜ್ ಅವರನ್ನು ಕಡೆಗಣಿಸಿ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈ ಚಿತ್ರ ಪ್ರದರ್ಶನ ಕಾಣದಂತೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ನಿರ್ಮಾಪಕ ಮಂದೀಪ್ ಅವರ ಮನವಿ ಪುರಸ್ಕರಿಸಿದ ನ್ಯಾಯಾಲಯವು ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭರತ್ ಭಂಡಾರಿ ಅವರು ಚಿತ್ರದ ನಿರ್ಮಾಣಕ್ಕಾಗಿ ನನ್ನಿಂದ 40 ಲಕ್ಷ ಬಂಡವಾಳ ಪಡೆದು ಮೊದಲ ಹಂತದ ಚಿತ್ರೀಕರಣ ಮುಗಿದ ಬಳಿಕ ಹಣ ಪಡೆದು ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಆದರೀಗ ಬೇರೆ ಯಾವುದೋ ನಿರ್ಮಾಪಕರ ಹೆಸರು ಹಾಕಿಕೊಂಡು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ನನಗೂ ಹಾಗೂ ಹಣ ನೀಡಿದ ಇತರ ಸಹನಿರ್ಮಾಪಕರಿಗೂ ವಂಚಿಸಿದ್ದಾರೆ” ಎಂದು ನಿರ್ಮಾಪಕ ಮಂಜೀತ್ ನಾಗರಾಜ್ ಅವರು ಆರೋಪಿಸಿದ್ದಾರೆ.

‘ಪಿಲಿ’ ಚಿತ್ರ ಪ್ರದರ್ಶನ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಾಗಿ ಅವರು ತಿಳಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

13 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

14 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

14 hours ago