Featured

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ

ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ ‘ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಅತಿಥಿಗಳಿಗಾಗಿ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.

ಕಾರ್ಯಕ್ರಮದ ಸುಗಮ ಹಾಗೂ ಶಿಸ್ತುಬದ್ಧ ನಿರ್ವಹಣೆಗಾಗಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೋರಲಾಗಿದೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ಇಂದು ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳಿಗಾಗಿ ಅಗತ್ಯ ಮಾರ್ಗಸೂಚಿಗಳು:

1. ಕಾರ್ಯಕ್ರಮಕ್ಕೆ ಪೂರ್ವ ನೋಂದಣಿ ಮಾಡಿಕೊಂಡಿರುವ ಆಹ್ವಾನಿತರಿಗೆ ಮಾತ್ರ ಪ್ರವೇಶ

2. ಪ್ರವೇಶ ದ್ವಾರಗಳನ್ನು ಸಂಜೆ 4:30 ಗಂಟೆಗೆ ಮುಚ್ಚಲಾಗುವುದು. ಸಮಯಕ್ಕಿಂತ ಮುಂಚಿತವಾಗಿ ಆಗಮಿಸಿ.

3. ಕಾರ್ಯಕ್ರಮ ಪ್ರವೇಶಕ್ಕಾಗಿ ಮಾನ್ಯವಾದ ಪ್ರವೇಶ ಪಾಸ್‌ನ್ನು ಕಡ್ಡಾಯವಾಗಿ ಪ್ರದರ್ಶಿಸಿ

4. ಪ್ರವೇಶ ಪಾಸ್‌ಗಳು ವೈಯಕ್ತಿಕ ಬಳಕೆಗೆ ಮಾತ್ರ ಮಾನ್ಯವಾಗಿದ್ದು, ಅವುಗಳನ್ನು ಹಂಚಿಕೆ ಮಾಡುವುದು, ವರ್ಗಾಯಿಸುವುದು,
ವಿನಿಮಯ ಮಾಡಿಕೊಳ್ಳುವುದು ಅಥವಾ ಮರುಮಾರಾಟ ಮಾಡುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

5. ಸುಗಮ ಹಾಗೂ ಸುರಕ್ಷಿತ ವ್ಯವಸ್ಥೆಗಾಗಿ ಎಲ್ಲ ಅತಿಥಿಗಳು ಸಮಯಪಾಲನೆ ಮಾಡುವುದು ಕಡ್ಡಾಯವಾಗಿದೆ.

6. ಕಾರ್ಯಕ್ರಮದ ಅವಧಿಯಲ್ಲಿ ನಾಗರಿಕ ಪ್ರಜ್ಞೆ, ಶಿಸ್ತು ಮತ್ತು ಪರಸ್ಪರ ಗೌರವವನ್ನು ಕಾಪಾಡಿ, ಕಾರ್ಯಕ್ರಮ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಸಂಪೂರ್ಣ ಸಹಕಾರ ನೀಡಬೇಕು.

7. ಜಗಳ, ಅಸಭ್ಯ ವರ್ತನೆ, ಗದ್ದಲ ಅಥವಾ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಯಾವುದೇ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

8. ಪ್ರವೇಶ ದ್ವಾರಗಳು, ಬ್ಯಾರಿಕೇಡ್‌ಗಳು ಹಾಗೂ ನಿರ್ಬಂಧಿತ ಪ್ರದೇಶಗಳಿಗೆ ಹಾನಿ ಉಂಟುಮಾಡುವುದು, ಅವುಗಳನ್ನು ದಾಟಲು ಪ್ರಯತ್ನಿಸುವುದು ಅಥವಾ ಅನಧಿಕೃತ ಪ್ರವೇಶ ಪಡೆಯಲು ಯತ್ನಿಸುವುದು ಕಾನೂನು ಕ್ರಮಕ್ಕೆ ಒಳಪಡಬಹುದು.

9. ಕಾರ್ಯಕ್ರಮ ಸ್ಥಳವು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿರುವುದರಿಂದ, ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಸಹಕರಿಸಿ

10. ಸಾಮಾನ್ಯ ಅತಿಥಿಗಳ ವಾಹನ ನಿಲುಗಡೆ ವ್ಯವಸ್ಥೆಯನ್ನು ಸಹ್ಯಾದ್ರಿ ಕಾಲೇಜಿನಲ್ಲಿ ಹಾಗೂ ವಿಶೇಷ ಅತಿಥಿಗಳ ವಾಹನ ನಿಲುಗಡೆ ವ್ಯವಸ್ಥೆಯನ್ನು ಕಾರ್ಯಕ್ರಮ ಸ್ಥಳದ ಸಮೀಪ ಕಲ್ಪಿಸಲಾಗಿದೆ. ದಯವಿಟ್ಟು ನಿಗದಿತ ವಾಹನ ನಿಲುಗಡೆ ಪ್ರದೇಶಗಳನ್ನೇ ಬಳಸಿರಿ.

11. ಭದ್ರತಾ ಸಿಬ್ಬಂದಿ, ಸ್ವಯಂಸೇವಕರು ಹಾಗೂ ಕಾರ್ಯಕ್ರಮ ನಿರ್ವಹಣಾ ತಂಡದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago