ಮುಂಬೈ: ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ವಿಧಾನಸಭಾ ಚುಣಾವಣಾ ಫಲಿತಾಂಶದ ಬಳಿಕ ತಿಂಗಳ ಕಾಲ ನಡೆದ ರಾಜಕೀಯ ಹಗ್ಗಜಗ್ಗಾಟದ ಬಳಿಕ ಶಿವಸೇನಾ ತನ್ನ ನಿಲುವನ್ನು ಸಾಧಿಸಿಕೊಳ್ಳುವ ಸನಿಹಕ್ಕೆ ಬಂದಿದೆ.
ಗುರುವಾರ(ನವೆಂಬರ್ 28) ಸಂಜೆ 6:40ಕ್ಕೆ ಶಿವಾಜಿ ಪಾರ್ಕ್ನಲ್ಲಿ ನಡೆಯುವ ಸಮಾರಂಭದಲ್ಲಿ ಉದ್ಧವ್ ಠಾಕ್ರೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಠಾಕ್ರೆ ಕುಟುಂಬದಲ್ಲಿ ಸಿಎಂ ಸ್ಥಾನ ಅಲಂಕರಿಸಿದ ಮೊದಲಿಗ ಎಂಬ ಹೆಸರಿನ ಜತೆಗೆ ಮನೋಹರ್ ಜೋಶಿ ಮತ್ತು ನಾರಾಯಣ ರಾಣೆ ಬಳಿಕ ಶಿವಸೇನಾ ಪಕ್ಷದಲ್ಲಿ ಸಿಎಂ ಸ್ಥಾನ ಪಡೆದ ಮೂರನೇ ನಾಯಕ ಎಂಬ ಹೆಗ್ಗಳಿಗೆ ಪಾತ್ರರಾಗಲಿದ್ದಾರೆ.
ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ಶಾಸಕರು ‘ಮಹಾ ವಿಕಾಸ ಅಘಾಡಿ’ ಮೈತ್ರಿಕೂಟದ ನಾಯಕನಾಗಿ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಆಯ್ಕೆ ಮಾಡಿದ್ದು, ಉದ್ಧವ್ ಠಾಕ್ರೆ ಶಿವಾಜಿ ಪಾರ್ಕ್ನಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರ ಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ರಾಜ್ಯಪಾಲರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ದೇಶದ ಗಣ್ಯರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…