Featured

ಇಂದು ಸಂಜೆಯಿಂದ ಫೆ.22 ರ‌ವರೆಗೆ ಪೊಳಲಿ ತಾಯಿಯ ಕಲಶಾಭಿಷೇಕದಂದು ಮತ್ತೆ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ಮಗುವಿನ ಕುಟುಂಬದ ಜೊತೆ ಕೈ ಜೋಡಿಸಿ -Vishwanews24

ಇಂದು ಸಂಜೆಯಿಂದ ಫೆ.22 ರ‌ವರೆಗೆ ಪೊಳಲಿ ತಾಯಿಯ ಕಲಶಾಭಿಷೇಕದಂದು ಮತ್ತೆ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ಮಗುವಿನ ಕುಟುಂಬದ ಜೊತೆ ಕೈ ಜೋಡಿಸಿ -Vishwanews24

ಇಂದು ಸಂಜೆಯಿಂದ ಫೆ.22 ರ‌ವರೆಗೆ ಪೊಳಲಿ ತಾಯಿಯ ಕಲಶಾಭಿಷೇಕದಂದು ಮತ್ತೆ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ನಿಹಾರಿಕ ಕುಟುಂಬದ ಜೊತೆ ಕೈ ಜೋಡಿಸಿ ..

ಫೆ. 19 ಶುಕ್ರವಾರ ಸಂಜೆಯಿಂದ 22 ಆದಿತ್ಯವಾರ‌ದವರೆಗೆ ಪೊಳಲಿ ತಾಯಿಯ ಸನ್ನಿಧಾನದಲ್ಲಿ ನಡೆಯುವ ಕಲಶಾಭಿಷೇಕದಂದು ಮಗುವಿಗಾಗಿ / ಮಗುವಿನ ಚಿಕಿತ್ಸೆಗಾಗಿ ಹೊಸ ಅವತಾರ ( ಹೊಸವೇಷ)ದಲ್ಲಿ ನಾನು ನಿಮ್ಮ ಮುಂದೆ ಬರಲಿದ್ದೇನೆ. ಕ್ಷೇತ್ರದ ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಪುಟ್ಟ ಕಂದಮ್ಮನ ಚಿಕಿತ್ಸೆಗೆ ನೆರವಾಗಬೇಕು ಎಂದು ವಿನಂತಿ.

ವಾಚ್ ಮ್ಯಾನ್ ಕೆಲಸದಲ್ಲಿರುವ ತಂದೆ, ಗೃಹಿಣಿ ತಾಯಿ. ಚಿಕ್ಕದಾದ ಸಂತೋಷದ ಚಿಲುಮೆ ಆಗಿದ್ದ ಈ ಕುಟುಂಬಕ್ಕೆ ಕೆಲವು ತಿಂಗಳುಗಳಿಂದ ತಮ್ಮ 7 ವರ್ಷದ ಮಗುವಿಗೆ ಕಾಡುವ ವಿಪರೀತ ಜ್ವರ ಬರಸಿಡಿಲಿನಂತೆ ಎಗರಿದೆ. ಎಲ್ಲರ ಕಣ್ಮಣಿಯಾಗಿದ್ದ ಈ ಕಂದಮ್ಮ ಬಿಡದೆ ಕಾಡುವ ಅನಾರೋಗ್ಯದಿಂದ ಕಂಗಾಲಾಗಿದ್ದಾರೆ.

ಮಗುವನ್ನು ದೇರಳಕಟ್ಟೆ , ನಿಟ್ಟೆ ಆಸ್ಪತ್ರೆ, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು. ಪ್ರಸ್ತುತ ಅತ್ತಾವರದ KMC ಆಸ್ಪತ್ರೆಯಲ್ಲಿರುವ ಈ ಮಗು H.L.H (hemophagocytic lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದಾನೆ.

ಮಗುವಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇರುವುದರಿಂದ KMC ವೈದ್ಯರ ನಿದರ್ಶನದಂತೆ ಮಗುವನ್ನು “ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿರುವ ಮಂಜೂದಾರ್ ಷಾ ಕ್ಯಾನ್ಸರ್ ಆಸ್ಪತ್ರೆಗೆ” ಕರೆದುಕೊಂಡು ಹೋಗಿದ್ದು ಅಲ್ಲಿ ನ ಉನ್ನತ ವೈದ್ಯರು ಮೂಳೆ ಅಸ್ಥಿಮಜ್ಜೆ ಕಸಿ (Bone Marrow transplant) ಮಾಡಲು ಸೂಚಿಸುತ್ತಾರೆ.

ಈ ಚಿಕಿತ್ಸೆಗೆ ಅಂದಾಜು 45 ಲಕ್ಷ ರೂಪಾಯಿ ಖರ್ಚಾಗುವ ಸಾಧ್ಯತೆ ಇದ್ದು ಈ ಮೊತ್ತವನ್ನು ಭರಿಸಲು ಕುಟುಂಬವು ಆಶಕ್ತವಾಗಿರುವುದರಿಂದ , ನಮ್ಮ ತುಳುನಾಡ್ ಟ್ರಸ್ಟ್ (ರಿ)ಯ ಆಶಿಸಾ ನಿಧಿ ಯೋಜನೆ ಮತ್ತು ಆತ್ಮೀಯರ ಸಹಕಾರದೊಂದಿಗೆ ದಿನಾಂಕ 19/02/2021 ಶುಕ್ರವಾರ ಸಂಜೆಯಿಂದ 22/02/2021 ಆದಿತ್ಯವಾರ‌ದವರೆಗೆ ಪೊಳಲಿ ತಾಯಿಯ ಸನ್ನಿಧಾನದಲ್ಲಿ ನಡೆಯುವ ಕಲಶಾಭಿಷೇಕದಂದು ಮಗುವಿಗಾಗಿ / ಮಗುವಿನ ಚಿಕಿತ್ಸೆಗಾಗಿ ಹೊಸ ಅವತಾರ ( ಹೊಸವೇಷ)ದಲ್ಲಿ ನಾನು ನಿಮ್ಮ ಮುಂದೆ ಬರಲಿದ್ದೇನೆ. ಕ್ಷೇತ್ರದ ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಪುಟ್ಟ ಕಂದಮ್ಮನ ಚಿಕಿತ್ಸೆಗೆ ನೆರವಾಗಬೇಕು ಎಂದು ವಿನಂತಿ.

“ನಾವು ಇಡುವ ಪ್ರತಿ ಹೆಜ್ಜೆಗೂ ಹೊನ್ನ ಮಳೆ ಸುರಿಸಿ ಬೆನ್ನೆಲುಬಾಗಿ ನಿಲ್ಲುವ ಎನ್ನ ಹೃದಯ ಗದ್ದುಗೆಯ ಒಡತಿ ಅಮ್ಮ ಜ್ಯೊತಿರ್ಮಾತೃ ಸ್ವರೂಪಿಣಿಯನ್ನ ನೆನೆಯುತ್ತ, ಪೊಳಲಿಯ ಒಡತಿಯಲ್ಲಿ ಅನುಮತಿ ಬೇಡುತ್ತ

ಫೆ. 19 ಶುಕ್ರವಾರ ಸಂಜೆಯಿಂದ 22 ಆದಿತ್ಯವಾರ‌ದವರೆಗೆ

ನಿಮ್ಮ ಮುಂದೆ ಮಗುವಿನ ನೆರವಿಗಾಗಿ ಸಹಾಯ ಬೇಡುತ್ತ ನಿಮ್ಮ ಮುಂದೆ ಬರುತ್ತಿದ್ದೇನೆ.

ಹರಸಿ – ಹಾರೈಸಿ ನೆರವಾಗಿ ಎಂಬ ವಿನಂತಿ ನಮ್ಮದು

ವಿಕ್ಕಿ ಶೆಟ್ಟಿ ಬೆದ್ರ

 

 

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

7 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

7 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

7 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

8 hours ago