ಇಂದು ಸಂಜೆಯಿಂದ ಫೆ.22 ರವರೆಗೆ ಪೊಳಲಿ ತಾಯಿಯ ಕಲಶಾಭಿಷೇಕದಂದು ಮತ್ತೆ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ನಿಹಾರಿಕ ಕುಟುಂಬದ ಜೊತೆ ಕೈ ಜೋಡಿಸಿ ..
ಫೆ. 19 ಶುಕ್ರವಾರ ಸಂಜೆಯಿಂದ 22 ಆದಿತ್ಯವಾರದವರೆಗೆ ಪೊಳಲಿ ತಾಯಿಯ ಸನ್ನಿಧಾನದಲ್ಲಿ ನಡೆಯುವ ಕಲಶಾಭಿಷೇಕದಂದು ಮಗುವಿಗಾಗಿ / ಮಗುವಿನ ಚಿಕಿತ್ಸೆಗಾಗಿ ಹೊಸ ಅವತಾರ ( ಹೊಸವೇಷ)ದಲ್ಲಿ ನಾನು ನಿಮ್ಮ ಮುಂದೆ ಬರಲಿದ್ದೇನೆ. ಕ್ಷೇತ್ರದ ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಪುಟ್ಟ ಕಂದಮ್ಮನ ಚಿಕಿತ್ಸೆಗೆ ನೆರವಾಗಬೇಕು ಎಂದು ವಿನಂತಿ.
ವಾಚ್ ಮ್ಯಾನ್ ಕೆಲಸದಲ್ಲಿರುವ ತಂದೆ, ಗೃಹಿಣಿ ತಾಯಿ. ಚಿಕ್ಕದಾದ ಸಂತೋಷದ ಚಿಲುಮೆ ಆಗಿದ್ದ ಈ ಕುಟುಂಬಕ್ಕೆ ಕೆಲವು ತಿಂಗಳುಗಳಿಂದ ತಮ್ಮ 7 ವರ್ಷದ ಮಗುವಿಗೆ ಕಾಡುವ ವಿಪರೀತ ಜ್ವರ ಬರಸಿಡಿಲಿನಂತೆ ಎಗರಿದೆ. ಎಲ್ಲರ ಕಣ್ಮಣಿಯಾಗಿದ್ದ ಈ ಕಂದಮ್ಮ ಬಿಡದೆ ಕಾಡುವ ಅನಾರೋಗ್ಯದಿಂದ ಕಂಗಾಲಾಗಿದ್ದಾರೆ.
ಮಗುವನ್ನು ದೇರಳಕಟ್ಟೆ , ನಿಟ್ಟೆ ಆಸ್ಪತ್ರೆ, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು. ಪ್ರಸ್ತುತ ಅತ್ತಾವರದ KMC ಆಸ್ಪತ್ರೆಯಲ್ಲಿರುವ ಈ ಮಗು H.L.H (hemophagocytic lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದಾನೆ.
ಮಗುವಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇರುವುದರಿಂದ KMC ವೈದ್ಯರ ನಿದರ್ಶನದಂತೆ ಮಗುವನ್ನು “ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿರುವ ಮಂಜೂದಾರ್ ಷಾ ಕ್ಯಾನ್ಸರ್ ಆಸ್ಪತ್ರೆಗೆ” ಕರೆದುಕೊಂಡು ಹೋಗಿದ್ದು ಅಲ್ಲಿ ನ ಉನ್ನತ ವೈದ್ಯರು ಮೂಳೆ ಅಸ್ಥಿಮಜ್ಜೆ ಕಸಿ (Bone Marrow transplant) ಮಾಡಲು ಸೂಚಿಸುತ್ತಾರೆ.
ಈ ಚಿಕಿತ್ಸೆಗೆ ಅಂದಾಜು 45 ಲಕ್ಷ ರೂಪಾಯಿ ಖರ್ಚಾಗುವ ಸಾಧ್ಯತೆ ಇದ್ದು ಈ ಮೊತ್ತವನ್ನು ಭರಿಸಲು ಕುಟುಂಬವು ಆಶಕ್ತವಾಗಿರುವುದರಿಂದ , ನಮ್ಮ ತುಳುನಾಡ್ ಟ್ರಸ್ಟ್ (ರಿ)ಯ ಆಶಿಸಾ ನಿಧಿ ಯೋಜನೆ ಮತ್ತು ಆತ್ಮೀಯರ ಸಹಕಾರದೊಂದಿಗೆ ದಿನಾಂಕ 19/02/2021 ಶುಕ್ರವಾರ ಸಂಜೆಯಿಂದ 22/02/2021 ಆದಿತ್ಯವಾರದವರೆಗೆ ಪೊಳಲಿ ತಾಯಿಯ ಸನ್ನಿಧಾನದಲ್ಲಿ ನಡೆಯುವ ಕಲಶಾಭಿಷೇಕದಂದು ಮಗುವಿಗಾಗಿ / ಮಗುವಿನ ಚಿಕಿತ್ಸೆಗಾಗಿ ಹೊಸ ಅವತಾರ ( ಹೊಸವೇಷ)ದಲ್ಲಿ ನಾನು ನಿಮ್ಮ ಮುಂದೆ ಬರಲಿದ್ದೇನೆ. ಕ್ಷೇತ್ರದ ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಪುಟ್ಟ ಕಂದಮ್ಮನ ಚಿಕಿತ್ಸೆಗೆ ನೆರವಾಗಬೇಕು ಎಂದು ವಿನಂತಿ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…