ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದ್ದು, ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಚಂದನವನದ ದೊಡ್ಮನೆ ಹುಡುಗ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 6-6.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆಂದು ಹೇಳಲಾಗುತ್ತಿದೆ.
ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆಗೊಳಿಸಲಾಗಿದ್ದು, ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಹೀಗಾಗಿ ಕುಟುಂಬಸ್ಥರು 3 ಗಂಟೆಯ ಬಳಿಕ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬರದಂತೆ ಮನವಿ ಮಾಡಿದ್ದಾರೆ.
ಪುನೀತ್ ಪುತ್ರಿ ಧ್ರುತಿ ನ್ಯೂಯಾರ್ಕ್ನಿಂದ ದೆಹಲಿಗೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ. ಧ್ರುತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಆಪ್ತವಲಯಕ್ಕಷ್ಟೇ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
ಪುನೀತ್ ಅಂತ್ಯಕ್ರಿಯೆ ಕುರಿತು ಮಾಹಿತಿ ನೀಡಿರುವ ಅವರು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಪುನೀತ್ ರಾಜ್ ಕುಮಾರ್ ಅವರ ಕುಟುಂಬಸ್ಥರ ನಿರ್ಧಾರದ ಮೇರೆಗೆ ಮುಂದಿನ ಹಂತದ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ಅಂತ್ಯಕ್ರಿಯೆ ಯಾವಾಗ ನಡೆಸುವುದು ಎಂಬುದನ್ನು ಪುನೀತ್ ಅವರ ಕುಟುಂಬಸ್ಥರೇ ನಿರ್ಧರಿಸುತ್ತಾರೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ರಾಕ್ಲೈನ್ ವೆಂಕಟೇಶ್ ಅವರು ಮಾತನಾಡಿ, ಸಂಜೆ 6 – 6.30ಕ್ಕೆ ಅಂತ್ಯ ಸಂಸ್ಕಾರ ನೆರವೇರುತ್ತೆಯ ಮುಖ್ಯಮಂತ್ರಿಗಳ ಆದೇಶದಂತೆ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಅಭಿಮಾನಿಗಳು ಸ್ಪಂದಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…