ಇಂದು `KRS, ಕಬಿನಿ’ಯಲ್ಲಿ ಸಿಎಂ ಬಿಎಸ್ ವೈ ಬಾಗಿನ ಅರ್ಪಣೆ -Vishwanews24
ಮಂಡ್ಯ : ಒಡಲು ತುಂಬಿರುವ ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ಮಾತೆಗೆ ಸಿಎಂ ಯಡಿಯೂರಪ್ಪ ಇಂದು ಬಾಗಿಲ ಅರ್ಪಿಸಲಿದ್ದಾರೆ. ಕೆಆರ್ಎಸ್ ಜಲಾಶಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಸಲ್ಲಿಸುವ ಭಾಗ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೊರೆತಿದೆ.
ಮಧ್ಯಾಹ್ನ 12.05 ರ ಅಭಿಜಿತ್ ಲಗ್ನದಲ್ಲಿ ತುಂಬಿದ ಕೆಆರ್ ಎಸ್ ಜಲಾಶಯಕ್ಕೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಕೆಆರ್ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ ಅರ್ಪಿಸಿದ ಕೀರ್ತಿಗೆ ಯಡಿಯೂರಪ್ಪ ಪಾತ್ರರಾಗಲಿದ್ದಾರೆ.
ವಿಶೇಷವೆಂದರೆ ಕಳೆದ ವರ್ಷ ಆಗಸ್ಟ್ 21ರಂದು ಕೆಆರ್ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಕೆಆರ್ಎಸ್ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿದ್ದು, ಮುಖ್ಯಮಂತ್ರಿಗಳು ಆಗಸ್ಟ್ 21 ರಂದೇ ಬಾಗಿನ ಅರ್ಪಿಸಲಿದ್ದಾರೆ.
ಕೆಆರ್ ಎಸ್ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…