Featured

ಇಂದು `KRS, ಕಬಿನಿ’ಯಲ್ಲಿ ಸಿಎಂ ಬಿಎಸ್ ವೈ ಬಾಗಿನ ಅರ್ಪಣೆ -Vishwanews24

ಇಂದು `KRS, ಕಬಿನಿ’ಯಲ್ಲಿ ಸಿಎಂ ಬಿಎಸ್ ವೈ ಬಾಗಿನ ಅರ್ಪಣೆ -Vishwanews24

ಮಂಡ್ಯ : ಒಡಲು ತುಂಬಿರುವ ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ಮಾತೆಗೆ ಸಿಎಂ ಯಡಿಯೂರಪ್ಪ ಇಂದು ಬಾಗಿಲ ಅರ್ಪಿಸಲಿದ್ದಾರೆ. ಕೆಆರ್‌ಎಸ್‌ ಜಲಾಶಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಸಲ್ಲಿಸುವ ಭಾಗ್ಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೊರೆತಿದೆ.

ಮಧ್ಯಾಹ್ನ 12.05 ರ ಅಭಿಜಿತ್ ಲಗ್ನದಲ್ಲಿ ತುಂಬಿದ ಕೆಆರ್ ಎಸ್ ಜಲಾಶಯಕ್ಕೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ ಅರ್ಪಿಸಿದ ಕೀರ್ತಿಗೆ ಯಡಿಯೂರಪ್ಪ ಪಾತ್ರರಾಗಲಿದ್ದಾರೆ.

ವಿಶೇಷವೆಂದರೆ ಕಳೆದ ವರ್ಷ ಆಗಸ್ಟ್ 21ರಂದು ಕೆಆರ್‌ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಕೆಆರ್‌ಎಸ್ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿದ್ದು, ಮುಖ್ಯಮಂತ್ರಿಗಳು ಆಗಸ್ಟ್ 21 ರಂದೇ ಬಾಗಿನ ಅರ್ಪಿಸಲಿದ್ದಾರೆ.

ಕೆಆರ್ ಎಸ್ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago