Featured

ಇಂದು19 ವಿಮಾನಗಳ ಮೂಲಕ ಉಕ್ರೇನ್ ನಿಂದ ಆಗಮಿಸಲಿರುವ 3,726 ಭಾರತೀಯರು – Vishwanews24

ಇಂದು19 ವಿಮಾನಗಳ ಮೂಲಕ ಉಕ್ರೇನ್ ನಿಂದ ಆಗಮಿಸಲಿರುವ 3,726 ಭಾರತೀಯರು – Vishwanews24

ನವದೆಹಲಿ: ರಷ್ಯಾ ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿರುವಂತ ಸಂದರ್ಭದಲ್ಲಿಯೇ, ಉಕ್ರೇನ್ ನಲ್ಲಿ ಸಿಲುಕಿರುವಂತ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವಂತ ಕೆಲಸದಲ್ಲಿ ವಿದೇಶಾಂಗ ಸಚಿವಾಲಯ ನಿರತವಾಗಿದೆ. ಇಂದು ತನ್ನ ಆಪರೇಷನ್ ಗಂಗಾ ಕಾರ್ಯಾಚರಣೆ ಮುಂದುವರೆಸಿದ್ದು, ಉಕ್ರೇನ್ ನಿಂದ ಗುರುವಾರದ ಇಂದು, 19 ವಿಮಾನಗಳ ಮೂಲಕ 3,726 ಭಾರತೀಯರನ್ನು ಮರಳಿ ಕರೆತರಲಾಗುತ್ತಿದೆ ಎಂಬುದಾಗಿ ವಿಮಾನಯಾನ ಸಚಿವರು ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಉಕ್ರೇನ್ ನ ನೆರೆಯ ದೇಶಗಳಿಂದ 3.726 ಭಾರತೀಯರನ್ನು ಭಾರತಕ್ಕೆ ಕರೆತರಲು ಐಎಎಫ್ ಮತ್ತು ಭಾರತೀಯ ವಿಮಾನಯಾನ ಸಂಸ್ಥೆಗಳ 19 ವಿಮಾನಗಳು ಇಂದು ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿಸಿದ್ದಾರೆ.

 

ಆಪರೇಶನ್ ಗಂಗಾ ಅಡಿಯಲ್ಲಿ, ಐಎಎಫ್, ಏರ್ ಇಂಡಿಯಾ ಮತ್ತು ಇಂಡಿಗೊದ ಎಂಟು ವಿಮಾನಗಳು ರೊಮೇನಿಯನ್ ರಾಜಧಾನಿ ಬುಚಾರೆಸ್ಟ್ ನಿಂದ ಭಾರತಕ್ಕೆ ಗುರುವಾರ ಕಾರ್ಯನಿರ್ವಹಿಸಲಿವೆ ಎಂದು ಅವರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago