ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24
ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24
ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್ಬಿಯು) ಮಾರ್ಚ್ 15 ಮತ್ತು 16ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಬ್ಯಾಂಕ್ಗಳಿಗೆ ನಾಲ್ಕು ದಿನ ರಜೆ ಇರಲಿದೆ.
ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇಂದು ಒಂದು ಮಾತ್ರ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.
ಮಹಿಳೆಯ ಆರೋಪಕ್ಕೆ ಸ್ಪಷ್ಟನೆ ನೀಡಿದ ಜೊಮ್ಯಾಟೊ ಡೆಲಿವರಿ ಬಾಯ್ -Vishwanews24
ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್ 13 ಎರಡನೇ ಶನಿವಾರವಾಗಿದ್ದು, ಮಾರ್ಚ್ 14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ.
ಕೊರೋನಾ 2ನೇ ಅಲೆ ಭೀತಿ : ಬೆಂಗಳೂರಿನಲ್ಲಿ ಮಾರ್ಚ್ 31ರವರೆಗೆ ನೈಟ್ ಪಾರ್ಟಿ ಬ್ಯಾನ್ -Vishwanews24
