ಮಂಗಳೂರು : ಪ್ರಮುಖ ತೈಲ ಸಂಸ್ಕರಣಾಗಾರವಾಗಿರುವ ಎಂಆರ್ಪಿಎಲ್ ಹಾಗೂ ಕಚ್ಛಾತೈಲ ಸಂಗ್ರಹಣಾ ಘಟಕ ಐಎಸ್ಪಿಆರೆಲ್ ಇವುಗಳನ್ನು ಹೊಂದಿರುವ ಮಂಗಳೂರು ದೇಶದ ಇಂಧನ ಕ್ಷೇತ್ರದಲ್ಲಿ ಬಹಳ ಪ್ರಾಧಾನ್ಯತೆ ಪಡೆದಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಂಜಯ್ ಸುಧೀರ್ ಹೇಳಿದ್ದಾರೆ.
ಐಎಸ್ಪಿಆರೆಲ್ ಘಟಕಕ್ಕೆ ಅಬು ಧಾಬಿ ರಾಷ್ಟ್ರೀಯ ತೈಲ ಕಂಪೆನಿಯಿಂದ ಇದೇ ಮೊದಲ ಬಾರಿಗೆ ಸರಬರಾಜಾದ ಕಚ್ಛಾ ತೈಲ ಆಗಮಿಸಿದ ಸಂದರ್ಭ ಆಯೋಜಿಸಲಾದ ಸಮಾರಂಭದಲ್ಲಿಅವರು ಮಾತನಾಡುತ್ತಿದ್ದರು. ಎಂಆರ್ಪಿಎಲ್ ಹಾಗೂ ಐಎಸ್ಪಿಆರೆಲ್ ಇವುಗಳಿಂದ ಕರ್ನಾಟಕಕ್ಕೆ ಮಾತ್ರವಲ್ಲದೆ ನೆರೆಯ ರಾಜ್ಯಗಳಿಗೂ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.
ಐಎಸ್ಪಿಆರೆಲ್ ಆಡಳಿತ ನಿರ್ದೇಶಕ ಹಾಗೂ ಸಿಇಒ ಎಚ್ ಪಿ ಎಸ್ ಅಹುಜಾ ಮಾತನಾಡುತ್ತಾ, ಯೋಜನೆಯಂಗವಾಗಿ ಮಂಗಳೂರು ತಾಲೂಕಿನ ಪೆರ್ಮುದೆ, ಉಡುಪಿಯ ಪಾದೂರು ಹಾಗೂ ವಿಶಾಖಪಟ್ಟಣದಲ್ಲಿ ನಿರ್ಮಾಣವಾಗಿರುವ ಸಂಗ್ರಹಾಗಾರಗಳು ಇಂಜಿನಿಯರಿಂಗ್ ವಿಸ್ಮಯಗಳಾಗಿವೆ ಎಂದು ಬಣ್ಣಿಸಿದ್ದಾರೆ.
ಪೆರ್ಮುದೆಯ ಸಂಗ್ರಹಾಗಾರದಲ್ಲಿ 15 ಲಕ್ಷ ಟನ್ ತೈಲ ಸಂಗ್ರಹಿಸಬಹುದಾದರೆ, ಪಾದೂರಿನ ಘಟಕದಲ್ಲಿ 25 ಲಕ್ಷ ಟನ್ ತೈಲ ಸಂಗ್ರಹಿಸಬಹುದಾಗಿದೆ. ಈ ಸಂಗ್ರಹಾಗಾರಗಳನ್ನು ನಿರ್ಮಿಸಲು 30 ಕಿಮೀ ಉದ್ದದ ಸುರಂಗವನ್ನು ನಿರ್ಮಿಸಲಾಗಿದ್ದು ಹತ್ತು ಮಹಡಿಯ ಕಟ್ಟಡಗಳಷ್ಟು ಎತ್ತರವಾಗಿರುವ ಈ ಸಂಗ್ರಹಾಗಾರ ಭೂಮಿಯ ಮೇಲ್ಮೈಗಿಂತ 60ರಿಂದ 70 ಮೀಟರ್ ಆಳದಲ್ಲಿದೆ.
ಮಂಗಳೂರಿನ ಸಂಗ್ರಹಾಗಾರದಲ್ಲಿ ಎರಡು ವಿಭಾಗಗಳಿದ್ದು ಒಂದು ವಿಭಾಗದಲ್ಲಿ ಈಗಾಗಲೇ ಕೇಂದ್ರದ ನಿಧಿಯಿಂದ ಪೂರೈಕೆಯಾದ ಕಚ್ಛಾತೈಲವನ್ನು ತುಂಬಲಾಗಿದ್ದರೆ, ಇನ್ನೊಂದರಲ್ಲಿ ಈಗ ಅಬುಧಾಬಿ ರಾಷ್ಟ್ರೀಯ ತೈಲ ಕಂಪೆನಿಯಿಂದ ಸರಬರಾಜಾಗಿರುವ ಕಚ್ಛಾ ತೈಲವನ್ನು ತುಂಬಿಸಲಾಗುವುದು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…