ದಕ್ಷಿಣ ಕನ್ನಡ

ಇಂಧನ ಕ್ಷೇತ್ರದಲ್ಲಿ ಮಂಗಳೂರಿಗೆ ಹೆಚ್ಚಿನ ಪ್ರಾಧಾನ್ಯತೆ’

ಮಂಗಳೂರು : ಪ್ರಮುಖ ತೈಲ ಸಂಸ್ಕರಣಾಗಾರವಾಗಿರುವ ಎಂಆರ್ಪಿಎಲ್ ಹಾಗೂ ಕಚ್ಛಾತೈಲ ಸಂಗ್ರಹಣಾ ಘಟಕ ಐಎಸ್ಪಿಆರೆಲ್ ಇವುಗಳನ್ನು ಹೊಂದಿರುವ ಮಂಗಳೂರು ದೇಶದ ಇಂಧನ ಕ್ಷೇತ್ರದಲ್ಲಿ ಬಹಳ ಪ್ರಾಧಾನ್ಯತೆ ಪಡೆದಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಂಜಯ್ ಸುಧೀರ್ ಹೇಳಿದ್ದಾರೆ.

ಐಎಸ್ಪಿಆರೆಲ್ ಘಟಕಕ್ಕೆ ಅಬು ಧಾಬಿ ರಾಷ್ಟ್ರೀಯ ತೈಲ ಕಂಪೆನಿಯಿಂದ ಇದೇ ಮೊದಲ ಬಾರಿಗೆ ಸರಬರಾಜಾದ ಕಚ್ಛಾ ತೈಲ ಆಗಮಿಸಿದ ಸಂದರ್ಭ ಆಯೋಜಿಸಲಾದ ಸಮಾರಂಭದಲ್ಲಿಅವರು ಮಾತನಾಡುತ್ತಿದ್ದರು. ಎಂಆರ್ಪಿಎಲ್ ಹಾಗೂ ಐಎಸ್ಪಿಆರೆಲ್ ಇವುಗಳಿಂದ ಕರ್ನಾಟಕಕ್ಕೆ ಮಾತ್ರವಲ್ಲದೆ ನೆರೆಯ ರಾಜ್ಯಗಳಿಗೂ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.

ಐಎಸ್ಪಿಆರೆಲ್ ಆಡಳಿತ ನಿರ್ದೇಶಕ ಹಾಗೂ ಸಿಇಒ ಎಚ್ ಪಿ ಎಸ್ ಅಹುಜಾ ಮಾತನಾಡುತ್ತಾ, ಯೋಜನೆಯಂಗವಾಗಿ ಮಂಗಳೂರು ತಾಲೂಕಿನ ಪೆರ್ಮುದೆ, ಉಡುಪಿಯ ಪಾದೂರು ಹಾಗೂ ವಿಶಾಖಪಟ್ಟಣದಲ್ಲಿ ನಿರ್ಮಾಣವಾಗಿರುವ ಸಂಗ್ರಹಾಗಾರಗಳು ಇಂಜಿನಿಯರಿಂಗ್ ವಿಸ್ಮಯಗಳಾಗಿವೆ ಎಂದು ಬಣ್ಣಿಸಿದ್ದಾರೆ.

ಪೆರ್ಮುದೆಯ ಸಂಗ್ರಹಾಗಾರದಲ್ಲಿ 15 ಲಕ್ಷ ಟನ್ ತೈಲ ಸಂಗ್ರಹಿಸಬಹುದಾದರೆ, ಪಾದೂರಿನ ಘಟಕದಲ್ಲಿ 25 ಲಕ್ಷ ಟನ್ ತೈಲ ಸಂಗ್ರಹಿಸಬಹುದಾಗಿದೆ. ಈ ಸಂಗ್ರಹಾಗಾರಗಳನ್ನು ನಿರ್ಮಿಸಲು 30 ಕಿಮೀ ಉದ್ದದ ಸುರಂಗವನ್ನು ನಿರ್ಮಿಸಲಾಗಿದ್ದು ಹತ್ತು ಮಹಡಿಯ ಕಟ್ಟಡಗಳಷ್ಟು ಎತ್ತರವಾಗಿರುವ ಈ ಸಂಗ್ರಹಾಗಾರ ಭೂಮಿಯ ಮೇಲ್ಮೈಗಿಂತ 60ರಿಂದ 70 ಮೀಟರ್ ಆಳದಲ್ಲಿದೆ.

ಮಂಗಳೂರಿನ ಸಂಗ್ರಹಾಗಾರದಲ್ಲಿ ಎರಡು ವಿಭಾಗಗಳಿದ್ದು ಒಂದು ವಿಭಾಗದಲ್ಲಿ ಈಗಾಗಲೇ ಕೇಂದ್ರದ ನಿಧಿಯಿಂದ ಪೂರೈಕೆಯಾದ ಕಚ್ಛಾತೈಲವನ್ನು ತುಂಬಲಾಗಿದ್ದರೆ, ಇನ್ನೊಂದರಲ್ಲಿ ಈಗ ಅಬುಧಾಬಿ ರಾಷ್ಟ್ರೀಯ ತೈಲ ಕಂಪೆನಿಯಿಂದ ಸರಬರಾಜಾಗಿರುವ ಕಚ್ಛಾ ತೈಲವನ್ನು ತುಂಬಿಸಲಾಗುವುದು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago