ನವದೆಹಲಿ :ಭಾರತದ ಪ್ರತಿಷ್ಟಿತ ವಾಯುಯಾನ ಸಂಸ್ಥೆಗಳಾದ ಏರ್ ಇಂಡಿಯಾ , ಇಂಡಿಗೋ ಕಳೆದ ಜೂನ್ನಿಂದ ಸುಮಾರು 250 ದೈನಂದಿನ ದೇಶೀಯ ವಿಮಾನಗಳ ಹಾರಾಟವನ್ನು ಕಡಿತಗೊಳಿಸಿದೆ.
ಮಧ್ಯಪ್ರಾಚ್ಯದ ತೈಲ ಬಿಕ್ಕಟ್ಟಿನಿಂದಾಗಿ ಇಂಧನ ವೆಚ್ಚ ದುಬಾರಿಯಗುತ್ತಿದೆ. ಇತ್ತ ಪ್ರಯಾಣಿಕರ ಸಂಖ್ಯೆ ಕೂಡ ಕುಸಿಯುತ್ತಿರುವುದರಿಂದ ಕಂಪನಿಗಳ ಮೇಲೆ ಹೊರೆ ಹೆಚ್ಚಾಗುತ್ತಿದೆ. ಇದರಿಂದ ಈಗಾಗಲೇ ವಿಮಾನಯಾನದ ಪ್ರಯಾಣದರ ಕೂಡ ಹೆಚ್ಚಳ ಆಗಿದೆ. ಮುಂದಿನ ಆಗಸ್ಟ್ ವರೆಗೂ ತೈಲ ಬಿಕ್ಕಟ್ಟು ಮುಂದುವರೆಯುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಬೇಸಿಗೆ ರಜೆ, ಪಾರ್ಟಿ ಹಾಗೂ ಇನ್ನಿತರ ಕಾರಣಗಳಿಗಾಗಿ ವಿಮಾನ ಪ್ರಯಾಣ ಕೈಗೊಳ್ಳುವ ಹೊತ್ತಿನಲ್ಲೇ ವಿಮಾನಗಳನ್ನ ಕಡಿಗೊಳಿಸಿರುವುದು ಪ್ರವಾಸೋದ್ಯಮಕ್ಕೂ ಹೊಡೆತ ನೀಡಿದಂತಾಗಿದೆ.
ಇದನ್ನೂ ಓದಿ:
ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಏರ್ ಇಂಡಿಯಾ ತನ್ನ ದೇಶೀಯ ವಿಮಾನ ಸಂಚಾರ ವೇಳಾಪಟ್ಟಿಯಲ್ಲಿ ಶೇ.22 ರಷ್ಟು ಕಡಿತಗೊಳಿಸಿದೆ. ಈ ಮೂಲಕ ಪ್ರತಿದಿನ ಸುಮಾರು 110 ವಿಮಾನಗಳ ಹಾರಾಟ ಕಡಿತಗೊಳಿಸಿದಂತಾಗುತ್ತದೆ. ಈ ಹಿಂದೆ ಈ ಸಂಸ್ಥೆಯಿಂದ 500 ವಿಮಾನಗಳು ದೇಶದಲ್ಲಿ ಹಾರಾಟ ನಡೆಸುತ್ತಿದ್ದವು.
ಇಂಡಿಗೋ ಸಂಸ್ಥೆಯಿಂದ ದಿನಕ್ಕೆ ಸುಮಾರು 2,200 ವಿಮಾನಗಳು ಹಾರಾಟ ನಡೆಸುತ್ತಿದ್ದವು. ಇದೀಗ ಇಂಡಿಗೋ ಸಂಸ್ಥೆ ಶೇ.5-7 ರಷ್ಟು ಕಡಿತಗೊಳಿಸಲು ಮುಂದಾಗಿದೆ. ಇದರ ಪರಿಣಾಮವಾಗಿ ದಿನಕ್ಕೆ 110 ವಿಮಾನಗಳು ಕಡಿಮೆಯಾಗಿವೆ.
ಇದನ್ನೂ ಓದಿ:
ಇತ್ತೀಚಿಗೆ ಹಲವು ಮಾರ್ಗಗಳ ವಿಮಾನ ಪ್ರಯಾಣ ದರದಲ್ಲಿ ಶೇ.30 ರಷ್ಟು ಹೆಚ್ಚಾಗಿದೆ. ಎಟಿಎಫ್ ವೆಚ್ಚ ಹೆಚ್ಚಾದ ಕಾರಣ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ 400-450 ರೂ. ರಷ್ಟು ಇಂಧನ ಸರ್ಚಾರ್ಜ್ಗಳನ್ನು ಹಾಕಿವೆ. ಇದೀಗ ಮತ್ತೊಂದು ಸುತ್ತಿನಲ್ಲಿ ಪ್ರಯಾಣದ ದರ ಏರಿಕೆಯಾಗಬಹುದು ಎನ್ನಲಾಗುತ್ತದೆ.
ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…
ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ…
ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ…
ಕೊಂಕಣ ರೈಲ್ವೆ ಮಾನ್ಸೂನ್ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ ಉಡುಪಿ: ಮುಂಗಾರು ಸವಾಲಿಗೆ…
ಜೂ.12ರವರೆಗೆ ಮಂಗಳೂರು ಜಂಕ್ಷನ್ - ಮುಂಬೈ ಸಿಎಸ್ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್ಎಂಟೆ ನಿಲ್ದಾಣದಲ್ಲಿ ಪ್ಲಾಟ್ಫಾರಂ ವಿಸ್ತರಣಾ…
ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ: ಕರಾವಳಿಯಲ್ಲಿ ಮತ್ತೆ ಬಿಸಿಲು ಮಂಗಳೂರು : ಕರ್ನಾಟಕಕ್ಕೆ ಮುಂಗಾರು ಮಾರುತಗಳ ಪ್ರವೇಶ ಕೊಂಚ ವಿಳಂಬವಾಗುವ…