ಬೆಂಗಳೂರು: ಕಾಂಗ್ರೆಸ್ನವರು ಚಿನ್ನದ ಬಟ್ಟಲುಗಳಿಂದ ವಿಷಯಗಳನ್ನು ಕೊಡುತ್ತಿದ್ದರೂ ನಮ್ಮವರು ತೆಗೆದುಕೊಳ್ಳಲು ಆಗುತ್ತಿಲ್ಲ. ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಜಗಳವೇ ಆಯ್ತು.ಇವರಿಂದ ಸರ್ಕಾರವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಜನರು ಮಾತನಾಡುತ್ತಿದ್ದಾರೆ. ಇಗೋ ಸಮಸ್ಯೆಯಿಂದ ಬಿಜೆಪಿಗೆ ದೊಡ್ಡ ಹಾನಿಯಾಗುತ್ತಿದೆ. ಇಷ್ಟೆಲ್ಲಾ ಪಕ್ಷದಲ್ಲಿ ಆಗುತ್ತಿರುವ ರಾದ್ದಾಂತವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನೊಮ್ಮೆ ನಾನು ದೆಹಲಿಗೆ ಹೋಗುವ ನಿರ್ಧಾರ ಮಾಡಿದ್ದೇನೆ. ಡಿಸೆಂಬರ್ 3 ರಂದು ಕೋರ್ ಕಮಿಟಿ ಸಭೆ ಇದೆ. ಅಲ್ಲಿ ಇದರ ಬಗ್ಗೆ ಚರ್ಚಿಸಿ ಇದಕ್ಕೆಲ್ಲ ಬ್ರೇಕ್ ಹಾಕುವಂತೆ ಹೈಕಮಾಂಡ್ಗೆ ಒತ್ತಾಯ ಮಾಡುತ್ತೇವೆ ಎಂದು ತಿಳಿಸಿದರು.
ಕರ್ನಾಟಕ ಬಿಜೆಪಿ ಬಗ್ಗೆ ನಾನು ವರಿಷ್ಠರಿಗೆ ಎರಡು ಪತ್ರ ಬರೆದಿದ್ದೇನೆ. ನಾನು ಅಧ್ಯಕ್ಷ ಇದ್ದಾಗಲೂ ಇದಕ್ಕಿಂತ ದೊಡ್ಡ ಗುಂಪುಗಳಿದ್ದವು. ಪಕ್ಷದ ಕಟ್ಟಿದ್ದು ನಾವು ಅಂತ ಅನಂತ್ ಕುಮಾರ್ ಹಾಗೂ ಯಡಿಯೂರಪ್ಪ ಗುಂಪು ಪ್ರಬಲವಾಗಿ ಸೆಣಸಾಡುತ್ತಿದ್ದವು. ಆದರೆ ಅನಂತ್ ಕುಮಾರ್ ಹಾಗೂ ಯಡಿಯೂರಪ್ಪ ಗುಂಪು ಯಾವತ್ತೂ ಬೀದಿಗೆ ಇಳಿದಿರಲ್ಲ ಎಂದರು.
ನೀವು ಇಲ್ಲಿ ಬೀದಿಗೆ ಹೋಗುವ ಬದಲು ದೆಹಲಿಗೆ ವಿಮಾನ ಹತ್ತಿ ಹೋಗಿ. ದೆಹಲಿಯಲ್ಲಿ ನಮ್ಮ ಅದ್ಭುತ ನಾಯಕರು ಇದ್ದಾರೆ. ದೆಹಲಿಗೆ ಹೋಗಿ ಪಕ್ಷದ ವಿಚಾರ ಹೇಳಿ ಸರಿಪಡಿಸಿಕೊಳ್ಳಿ. ಇಲ್ಲದಿದ್ದರೆ ನೀವೆಲ್ಲ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಎಂದು ಕರೆಸಿಕೊಳ್ಳಲು ನಾಲಾಯಕ್ ಎಂದು ವಿಜಯೇಂದ್ರ, ಯತ್ನಾಳ್ ತಂಡಕ್ಕೆ ಡಿವಿಎಸ್ ಕಿವಿಮಾತು ಹೇಳಿದರು.
ನಾವು ಹಿರಿಯರು ಸೇರಿಕೊಂಡು ಒಂದು ಸಭೆ ಕರೆಯಬೇಕು. ಎರಡೂ ಗುಂಪುಗಳನ್ನು ಕರೆದು ಮಾತಾಡಬೇಕು ಅಂತ ನಮ್ಮ ಮನಸ್ಸಿನಲ್ಲಿತ್ತು. ಆದರೆ ಅವರು ಯಾವಾಗ ಬೀದಿಗೆ ಇಳಿದರೋ ಆಗ ಇದು ನಮ್ಮ ಕೈಯಲ್ಲಿ ಆಗದ ಕೆಲಸ ಅಂತ ಗೊತ್ತಾಯ್ತು. ಬಿಜೆಪಿ ಭಿನ್ನಮತ ರಾಜ್ಯದ ಹಿರಿಯರ ಕೈಮೀರಿ ಹೋಗಿದೆ ಎಂದು ತಿಳಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…