ಬೆಂಗಳೂರು: ಐಶ್ವರ್ಯ ಗೌಡ ಕೇಸ್ನಲ್ಲಿ ಇಡಿ ಕೊಟ್ಟಿರೋ ನೋಟಿಸ್ಗೆ ನನ್ನ ತಮ್ಮ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಡಿ.ಕೆ ಸುರೇಶ್ ಅವರಿಗೆ ಇಡಿ ನೋಟಿಸ್ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಸಹೋದರ ಇರಲಿಲ್ಲ. ಅಂಟಿಸಿ ಹೋಗ್ತೀನಿ ಅಂತ ಹೇಳಿದ್ರಂತೆ. ಅದಕ್ಕೆ ನಾನು ರಿಸೀವ್ ಮಾಡಿ ಅಂತ ಹೇಳಿದ್ದೇನೆ. ನನ್ನ ಸಹೋದರ ತನ್ನ ಹೆಸರು ಮಿಸ್ ಯೂಸ್ ಆಗಿದೆ ತನಿಖೆ ಮಾಡಿ ಅಂತ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಸಹೋದರ ಹೋಗಿ ಇಡಿಗೆ ಏನು ಬೇಕಾದರೂ ಸಹಕಾರ ಕೊಡ್ತಾರೆ ಎಂದು ಹೇಳಿದ್ದಾರೆ.
ಕಾನೂನು ಬಾಹಿರ ಚಟುವಟಿಕೆ ಮಾಡೋರು, ಮೋಸ ಮಾಡೋರು, 3-4 ಜನ ಮೋಸ ಆಗಿರೋರು ಬಂದು ನಿಮ್ಮ ಹೆಸರು ಮಿಸ್ ಯೂಸ್ ಮಾಡ್ತಿದ್ದಾರೆ ಅಂತ ಹೇಳಿದ್ದಾರೆ. ಅದನ್ನು ತನಿಖೆ ಮಾಡಿ ಅಂತ ನಾವು ಹೇಳಿದ್ದೇವೆ. ಇಡಿಗೆ ಸಹಕಾರ ಕೊಡೋಕೆ ನಾವು ತಯಾರಿದ್ದೇವೆ. ನಾವು ಈ ದೇಶದ ಕಾನೂನಿಗೆ, ವಿಚಾರಣೆಗೆ ಇಂತಹ ಮೋಸ ಮಾಡೋ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಸಹಕಾರ ಕೊಡ್ತೀವಿ. ನಾವು ಸಮಾಜಕ್ಕೆ, ಜನರಿಗೆ ನ್ಯಾಯ ಒದಗಿಸಿ ಕೊಡಬೇಕು. ಅದು ನಮ್ಮ ಕರ್ತವ್ಯ. ಅದನ್ನ ಸುರೇಶ್, ಶಿವಕುಮಾರ್ ಮಾಡ್ತಾರೆ. ನಾವು ಇಡಿಗೆ ಎಲ್ಲಾ ಸಹಕಾರ ಕೊಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…