Featured

ಇಡೀ ಜಗತ್ತಿನ ಆಶೀರ್ವಾದ ಇರುವ ವ್ಯಕ್ತಿಗೆ ಯಾವುದೇ ತೊಂದರೆ ಬರಲ್ಲ : ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವದ ಅಭಯ

ಇಡೀ ಜಗತ್ತಿನ ಆಶೀರ್ವಾದ ಇರುವ ವ್ಯಕ್ತಿಗೆ ಯಾವುದೇ ತೊಂದರೆ ಬರಲ್ಲ : ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವದ ಅಭಯ..

ಇಡೀ ಲೋಕದ ರಕ್ಷಣೆ ಮಾಡುವ ಮಾಯೆ ನಾನು, ನಿಮಗೆ ಭಯ ಬೇಡ, ಯಾವುದೇ ತೊಂದರೆ ಬರದ ರೀತಿಯಲ್ಲಿ ನಾನು ನೋಡಿಕೊಳ್ಳುತ್ತಾನೆ..

ಕಿನ್ನಿಗೋಳಿ : ಇಡೀ ಜಗತ್ತಿನ ಆಶೀರ್ವಾದ ಇರುವ ವ್ಯಕ್ತಿಗೆ ಯಾವುದೇ ತೊಂದರೆ ಬರಲ್ಲ. ಲೋಕದ ರಕ್ಷಣೆ ಮಾಡುವ ಮಾಯೆ ನಾನು. ನಿಮಗೆ ಭಯ ಬೇಡ, ಯಾವುದೇ ತೊಂದರೆ ಬರದ ರೀತಿಯಲ್ಲಿ ನಾನು ನೋಡಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ ನೀಡಿದೆ.

ಶಿಬರೂರು ಕೊಡಮಣಿತ್ತಾಯ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯಕ್ಕಾಗಿ ದೈವಕ್ಕೆ ತುಡರಬಲಿ ಸೇವೆ ನೆರವೇರಿತು. ಪಂಜಾಬ್​ನಲ್ಲಿ ಪ್ರಧಾನಿಗೆ ಭದ್ರತಾಲೋಪ ಪ್ರಕರಣ ನಡೆಯುತ್ತಿದ್ದಂತೆ, ಅವರಿಗೆ ದೀರ್ಘಾಯುಷ್ಯ ನೀಡಲೆಂದು ಅನೇಕ ಕಡೆ ಅಭಿಮಾನಿಗಳು ಹೋಮಹವನ ನಡೆಸಿದ್ದಾರೆ. ಇಲ್ಲೂ ಮೋದಿ ಅಭಿಮಾನಿ ಶಿಬರೂರು ನಿವಾಸಿ ತುಕಾರಾಮ ಸಾಲಿಯಾನ್​ ಅವರು ಮೋದಿ ಅವರಿಗೆ ಯಾವುದೇ ತೊಂದರೆ ಆಗಬಾರದೆಂದು ಶಿಬರೂರು ಉಳ್ಳಾಯ ಮತ್ತು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ತುಡರಬಲಿ ಸೇವೆ ನೀಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಆ ಪ್ರಯುಕ್ತ ಭಾನುವಾರ ರಾತ್ರಿ ಸೇವೆ ಸಲ್ಲಿಸಿದರು.

ನರೇಂದ್ರ ಮೋದಿಯವರು ನಿಜವಾದ ಜನನಾಯಕ, ಮೋದಿ ಪ್ರಧಾನಿಯಾದ ನಂತರ ದೇಶ ಸಾಕಷ್ಟು ಅಭಿವೃದ್ಧಿ ಕಂಡಿದೆ. ಈ ಕಾರಣದಿಂದ ನಾನು ನರೇಂದ್ರ ಮೋದಿ ಅವರ ಅಭಿಮಾನಿಯಾಗಿದ್ದೇನೆ. ಪಂಜಾಬಿನಲ್ಲಿ ನಡೆದ ಘಟನೆ ಸಂದರ್ಭ ನನಗೆ ತುಂಬಾ ನೋವಾಗಿದ್ದು, ಮೋದಿಯವರಿಗೆ ಯಾವುದೇ ತೊಂದರೆ ಬರಬಾರದೆಂದು ಪ್ರಾರ್ಥಿಸಿ ಕೊಡಮಣಿತ್ತಾಯ ದೈವಕ್ಕೆ ತುಡರಬಲಿ ಸೇವೆ ನೀಡುವುದಾಗಿ ಹರಕೆ ಹೊತ್ತುಕೊಂಡಿದ್ದೆ. ಅದರಂತೆ ಸೇವೆ ಮಾಡಿದೆ ಎಂದು ತುಕಾರಾಮ ಸಾಲಿಯಾನ್​ ತಿಳಿಸಿದರು.

ಅಭಯ ನೀಡಿದ ದೈವ: ಇಡೀ ಜಗತ್ತಿನ ಆಶೀರ್ವಾದ ಇರುವ ವ್ಯಕ್ತಿಗೆ ಯಾವುದೇ ತೊಂದರೆ ಬರಲ್ಲ, ಇಡೀ ಲೋಕದ ರಕ್ಷಣೆ ಮಾಡುವ ಮಾಯೆ ನಾನು, ನಿಮಗೆ ಭಯ ಬೇಡ, ಯಾವುದೇ ತೊಂದರೆ ಬರದ ರೀತಿಯಲ್ಲಿ ನಾನು ನೋಡಿಕೊಳ್ಳುತ್ತಾನೆ ಎಂದು ದೈವ ಅಭಯ ನೀಡಿತು.

ಇಲ್ಲಿನ ತೀರ್ಥ ಮತ್ತು ಮಣ್ಣಿಗೆ ವಿಷ ಹೀರುವ ಶಕ್ತಿ ಇದೆ: ಶಿಬರೂರು ಕೊಡಮಣಿತ್ತಾಯ ದೈವಸ್ಥಾನ ಕರಾವಳಿಯಲ್ಲಿ ಅತ್ಯಂತ ಕಾರಣಿಕದ ದೈವಸ್ಥಾನವಾಗಿದೆ. ಇಲ್ಲಿನ ಮಣ್ಣು ಮತ್ತು ತೀರ್ಥ ಅತ್ಯಂತ ಪ್ರಸಿದ್ಧಿ ಹೊಂದಿದ್ದು, ಇಲ್ಲಿನ ತೀರ್ಥ ಮತ್ತು ಮಣ್ಣಿಗೆ ವಿಷವನ್ನು ಹೀರುವ ಶಕ್ತಿ ಇದೆ ಎಂಬ ನಂಬಿಕೆ ಇದೆ. ವಿಷಜಂತುಗಳು ಕಡಿದಾಗ ಇಲ್ಲಿನ ತೀರ್ಥ ಮತ್ತು ಮಣ್ಣನ್ನು ಬಾಯಿಗೆ ಹಾಕಿದರೆ ವಿಷ ನಿವಾರಣೆ ಆಗುತ್ತದೆ ಎಂಬ ನಂಬಿಕೆ ಈ ಭಾಗದ ಜನರಲ್ಲಿದೆ. ಡಿಸೆಂಬರ್​ ತಿಂಗಳಲ್ಲಿ ಬರುವ ಜಾತ್ರಾಮಹೋತ್ಸವದ ಸಂದರ್ಭ ಇಲ್ಲಿನ ತೀರ್ಥ ಮತ್ತು ಮಣ್ಣನ್ನು ಭಕ್ತರು ಮನೆಗೆ ತೆಗೆದುಕೊಂಡು ಹೋಗಿ ಇಡುತ್ತಾರೆ. ಚರ್ಮರೋಗ, ಆರೋಗ್ಯದ ಸಮಸ್ಯೆ, ಮಕ್ಕಳಾಗದಿರುವಿಕೆ ಮತ್ತಿತರ ಸಮಸ್ಯೆಗಳ ನಿವಾರಣೆಗಾಗಿ ಭಕ್ತರು ಹರಕೆ ಹೊರುತ್ತಾರೆ. ಇಷ್ಟಾರ್ಥ ಸಿದ್ಧಿಸಿದ ಬಳಿಕ ಪ್ರತಿ ವರ್ಷ ತುಲಾಬಾರ, ಕಂಚಿಲು ಸೇವೆ, ಉರುಳು ಸೇವೆ ಮತ್ತಿತರ ಸೇವೆಗಳು ಭಕ್ತರಿಂದ ಸಂದಾಯವಾಗುತ್ತದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

5 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

6 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago