Featured

ಇಡೀ ದೇಶದಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಗಳಿಸಲು ಕಾರಣವಾದ ಮತದಾರರಿಗೆ ಈ ಗೆಲುವನ್ನು ಅರ್ಪಿಸಲಿದ್ದೇನೆ : ವಾರಣಾಸಿಯಲ್ಲಿ ಮೋದಿ -Vishwanews24

ಹೊಸದಿಲ್ಲಿ: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವುದು ನನ್ನ ಗೆಲುವಲ್ಲ. ದೇವರ ಆಶೀರ್ವಾದದಿಂದ ಹಾಗೂ ಮತದಾರ ಪ್ರಭುಗಳ ಪ್ರೀತಿಯಿಂದ ಇಲ್ಲಿ ಗೆಲುವು ದಕ್ಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು.

ವಾರಾಣಸಿ ಕ್ಷೇತ್ರದಿಂದ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ಇಲ್ಲಿನ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಅದಕ್ಕೂ ಮುನ್ನ ಮತದಾರ ಬಂಧುಗಳಿಗೆ ಕೃತಜ್ಞತೆ ಸಲ್ಲಿಸಲು ವಿಜಯ ಯಾತ್ರೆ ನಡೆಸಿದರು.

ಯಾವುದೇ ಒಂದು ಚುನಾವಣೆಯಲ್ಲಿ ಅಭ್ಯರ್ಥಿಯ ಹೃದಯ ಬಡಿತ, ಆತಂಕ, ಕಾತರ ದುಪ್ಪಟ್ಟು ಇರುತ್ತದೆ. ಆದರೆ ನನಗೆ ಮಾತ್ರ ಈ ರೀತಿಯ ಯಾವುದೇ ಸಮಸ್ಯೆಗಳು ಇರಲಿಲ್ಲ. ನಾನು ಅತ್ಯಂತ ನಿಶ್ಚಿಂತೆಯಿಂದ ಇದ್ದೆ. ಇಡೀ ದೇಶವನ್ನು ಸುತ್ತಾಡಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಸಾಧ್ಯವಾಯಿತು. ನನ್ನ ನಿಶ್ಚಿಂತೆಗೆ ನೀವು, ಮತದಾರ ಪ್ರಭುತಗಳು ಕಾರಣ. ನನ್ನ ಗೆಲುವಿಗೆ ಪ್ರತಿಯೊಬ್ಬರು ಶ್ರಮಿಸಿದ್ದಾರೆ. ಈ ಗೆಲುವನ್ನು ಮತದಾರರಿಗೆ ಅರ್ಪಿಸಲಿದ್ದೇನೆ ಎಂದು ಮೋದಿ ತಿಳಿಸಿದರು.

ಇಡೀ ದೇಶದಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಗಳಿಸಲು ಕೋಟ್ಯಂತರ ಕಾರ್ಯಕರ್ತರು, ಕೋಟ್ಯಂತರ ಮತದಾರು, ಮಾತೆಯರು, ಯುವ ಸಮುದಾಯ ಕಾರಣವಾಗಿದೆ. ಎಲ್ಲ ಮತದಾರರಿಗೆ ಅಭಿನಂದನೆಗಳು ಎಂದು ಮೋದಿ ತಿಳಿಸಿದರು.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

3 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

3 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

3 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

4 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

4 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

4 hours ago