Featured

ಇಡೀ ದೇಶವನ್ನು ಕೇಸರಿಕರಣಗೊಳಿಸುವ ವ್ಯವಸ್ಥಿತ ಹುನ್ನಾರ : ದಿನೇಶ್ ಗುಂಡೂರಾವ್ ಕಿಡಿ – Vishwanews24

ತ್ರಿವರ್ಣ ಧ್ವಜದ ಬದಲು ಭಗವಾಧ್ವಜವನ್ನು ರಾಷ್ಟ್ರೀಯ ಧ್ವಜವನ್ನಾಗಿ ಮಾಡುವ ಹಿಡನ್ ಅಜೆಂಡಾ ಆರ್‌ಎಸ್‍ಎಸ್‍ನದ್ದು ..

ಬೆಂಗಳೂರು: ಇಡೀ ದೇಶವನ್ನು ಕೇಸರಿಕರಣಗೊಳಿಸುವ ವ್ಯವಸ್ಥಿತ ಹುನ್ನಾರವೊಂದು ಆರ್‌ಎಸ್‍ಎಸ್ ಪಡಸಾಲೆಯಲ್ಲಿ ನಡೆಯುತ್ತಿದೆ ಶಾಸಕ ದಿನೇಶ್ ಗುಂಡೂರಾವ್ ಕಿಡಿಕಾರಿದರು.

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಸಚಿವ ಈಶ್ವರಪ್ಪ ಹೇಳಿಕೆ ಸಂವಿಧಾನ ವಿರೋಧಿ ನಡೆಯ ಜೊತೆಗೆ ರಾಷ್ಟ್ರದ್ರೋಹವು ಹೌದು. ಈಶ್ವರಪ್ಪ ಆರ್‌ಎಸ್‍ಎಸ್ ಕಾರ್ಯತಂತ್ರವನ್ನು ತಪ್ಪಿ ಬಾಯಿಬಿಟ್ಟಿದ್ದಾರೆ. ಧ್ವಜ ವಿವಾದ ಆರ್‌ಎಸ್‍ಎಸ್ ಕಾರ್ಯಸೂಚಿಯ ಒಂದು ಭಾಗ. ನಾಜಿ ಸಂತತಿಯ ಅನ್‍ಡಿಟೆಡ್ ವರ್ಷನ್ ಆಗಿರುವ ಆರ್‌ಎಸ್‍ಎಸ್ ಪ್ರಾರಂಭದಿಂದಲೂ ಸಂವಿಧಾನ ವಿರೋಧಿ ಎಂದು ಕಿಡಿಕಾರಿದರು

ತ್ರಿವರ್ಣ ಧ್ವಜವನ್ನು ಒಪ್ಪಿಕೊಳ್ಳುವ ಮನಃಸ್ಥಿತಿ ಆರ್‌ಎಸ್‍ಎಸ್‍ಗೆ ಆಗಲೂ ಇರಲಿಲ್ಲ. ಈಗಲೂ ಇಲ್ಲ. ತ್ರಿವರ್ಣ ಧ್ವಜದ ಬದಲು ಭಗವಾಧ್ವಜ ವನ್ನು ರಾಷ್ಟ್ರೀಯ ಧ್ವಜವನ್ನಾಗಿ ಮಾಡುವ ಹಿಡನ್ ಅಜೆಂಡಾ ಆರ್‌ಎಸ್‍ಎಸ್‍ನದ್ದು. ಆರ್‌ಎಸ್‍ಎಸ್‍ನ ಈ ಅಜೆಂಡಾವೇ ಈಶ್ವರಪ್ಪ ಬಾಯಿಂದ ಹೊರಬಂದಿದೆಯಷ್ಟೇ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕರಿಗೆ ಸಂವಿಧಾನ ಹಾಗೂ ರಾಷ್ಟ್ರಧ್ವಜದ ಮೇಲೆ ನಿಜವಾದ ಗೌರವವಿದ್ದರೆ ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಬೇಕು. ಜೊತೆಗೆ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಇಲ್ಲದೇ ಹೋದರೆ ರಾಷ್ಟ್ರದ್ರೋಹಿ ಈಶ್ವರಪ್ಪ ಮತ್ತು ಅವರ ಬೆಂಬಲಿತ ಬಿಜೆಪಿ ವಿರುದ್ಧ ನಮ್ಮ ಹೋರಾಟ ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

7 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

7 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

7 hours ago