Featured

ಇಡೀ ದೇಶ ನಮ್ಮ ವಿಧಾನಸಭೆ ಕಡೆ ತಿರುಗಿ ನೋಡುವಂತೆ ಸಂವಿಧಾನ ನಿಷ್ಟರಾಗಿ ಕಾರ್ಯ ನಿರ್ವಹಿಸಬೇಕು : ನೂತನ ಸಭಾಧ್ಯಕ್ಷರಿಗೆ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಸಲಹೆ -Vishwanews24

ಬೆಂಗಳೂರು: ಇಡೀ ದೇಶ ನಮ್ಮ ವಿಧಾನಸಭೆ ಕಡೆ ತಿರುಗಿ ನೋಡುವಂತೆ ಸಂವಿಧಾನ ನಿಷ್ಟರಾಗಿ ಕಾರ್ಯ ನಿರ್ವಹಿಸಬೇಕೆಂದು ನೂತನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಸಲಹೆ ನೀಡಿದರು.

ವಿಧಾನಸಭೆಯಲ್ಲಿ ಅವಿರೋಧವಾಗಿ ಸಭಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸಭಾಧ್ಯಕ್ಷರ ಸ್ಥಾನದ ಗೌರವ ಹೆಚ್ಚುವ ರೀತಿಯಲ್ಲಿ ಜನರ ವಿಚಾರಗಳು ಹೆಚ್ಚು ಚೆರ್ಚೆಯಾಗಬೇಕು ಎಂದು ಹೇಳಿದರು.

ಧ್ವನಿ ಇಲ್ಲದವರ ಹಾಗೂ ಜನರ ವಿಚಾರದ ಬಗ್ಗೆ ಹೆಚ್ಚು ಅವಕಾಶ ದೊರೆಯಬೇಕು. ಸಂಸದೀಯ ವೇದಿಕೆಗಳಲ್ಲಿ ರಜೆಯ ವಿಚಾರ ಚರ್ಚೆಯಾಗುವುದಿಲ್ಲ ಎಂಬುದನ್ನು ದೂರ ಮಾಡಬೇಕು.

ಅಂಬೇಡ್ಕರ್ ಅವರು ಸಮಾನತೆ ಆಧಾರದ ಮೇಲೆ ಅಖಂಡ ಭಾರತ ಇರಬೇಕು ಎಂದು ಪ್ರತಿಪಾದಿಸಿದವರು. ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಶಾಸನ ಸಭೆ ಆರಂಭಗೊಂಡಿದ್ದು ಎಂದು ಅದರ ಇತಿಹಾಸವನ್ನು ಮೆಲುಕು ಹಾಕಿದರು.

ಹಣಕಾಸಿನ ವಿಚಾರದಲ್ಲೂ ಕೂಡ ಎಚ್ಚರಿಕೆಯಿಂದ ಇದ್ದವರು. ಪ್ರಾಮಾಣಿಕರಾಗಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ನಿಮ್ಮ ನೋವು ಹಂಚಿಕೊಳ್ಳಲು ನಿಮ್ಮೊಂದಿಗೆ ಇರುವುದಾಗಿ ಹೇಳಿ ರಮೇಶ್‍ಕುಮಾರ್ ನೂತನ ಸ್ಪೀಕರ್ ಅವರನ್ನು ಅಭಿನಂದಿಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

8 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago