ಬೆಂಗಳೂರು: ಇಡೀ ದೇಶ ನಮ್ಮ ವಿಧಾನಸಭೆ ಕಡೆ ತಿರುಗಿ ನೋಡುವಂತೆ ಸಂವಿಧಾನ ನಿಷ್ಟರಾಗಿ ಕಾರ್ಯ ನಿರ್ವಹಿಸಬೇಕೆಂದು ನೂತನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಾಜಿ ಸ್ಪೀಕರ್ ರಮೇಶ್ಕುಮಾರ್ ಸಲಹೆ ನೀಡಿದರು.
ವಿಧಾನಸಭೆಯಲ್ಲಿ ಅವಿರೋಧವಾಗಿ ಸಭಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸಭಾಧ್ಯಕ್ಷರ ಸ್ಥಾನದ ಗೌರವ ಹೆಚ್ಚುವ ರೀತಿಯಲ್ಲಿ ಜನರ ವಿಚಾರಗಳು ಹೆಚ್ಚು ಚೆರ್ಚೆಯಾಗಬೇಕು ಎಂದು ಹೇಳಿದರು.
ಧ್ವನಿ ಇಲ್ಲದವರ ಹಾಗೂ ಜನರ ವಿಚಾರದ ಬಗ್ಗೆ ಹೆಚ್ಚು ಅವಕಾಶ ದೊರೆಯಬೇಕು. ಸಂಸದೀಯ ವೇದಿಕೆಗಳಲ್ಲಿ ರಜೆಯ ವಿಚಾರ ಚರ್ಚೆಯಾಗುವುದಿಲ್ಲ ಎಂಬುದನ್ನು ದೂರ ಮಾಡಬೇಕು.
ಅಂಬೇಡ್ಕರ್ ಅವರು ಸಮಾನತೆ ಆಧಾರದ ಮೇಲೆ ಅಖಂಡ ಭಾರತ ಇರಬೇಕು ಎಂದು ಪ್ರತಿಪಾದಿಸಿದವರು. ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಶಾಸನ ಸಭೆ ಆರಂಭಗೊಂಡಿದ್ದು ಎಂದು ಅದರ ಇತಿಹಾಸವನ್ನು ಮೆಲುಕು ಹಾಕಿದರು.
ಹಣಕಾಸಿನ ವಿಚಾರದಲ್ಲೂ ಕೂಡ ಎಚ್ಚರಿಕೆಯಿಂದ ಇದ್ದವರು. ಪ್ರಾಮಾಣಿಕರಾಗಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ನಿಮ್ಮ ನೋವು ಹಂಚಿಕೊಳ್ಳಲು ನಿಮ್ಮೊಂದಿಗೆ ಇರುವುದಾಗಿ ಹೇಳಿ ರಮೇಶ್ಕುಮಾರ್ ನೂತನ ಸ್ಪೀಕರ್ ಅವರನ್ನು ಅಭಿನಂದಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…