ಬೆಂಗಳೂರು: ಇಡೀ ದೇಶ ನಮ್ಮ ವಿಧಾನಸಭೆ ಕಡೆ ತಿರುಗಿ ನೋಡುವಂತೆ ಸಂವಿಧಾನ ನಿಷ್ಟರಾಗಿ ಕಾರ್ಯ ನಿರ್ವಹಿಸಬೇಕೆಂದು ನೂತನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಾಜಿ ಸ್ಪೀಕರ್ ರಮೇಶ್ಕುಮಾರ್ ಸಲಹೆ ನೀಡಿದರು.
ವಿಧಾನಸಭೆಯಲ್ಲಿ ಅವಿರೋಧವಾಗಿ ಸಭಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸಭಾಧ್ಯಕ್ಷರ ಸ್ಥಾನದ ಗೌರವ ಹೆಚ್ಚುವ ರೀತಿಯಲ್ಲಿ ಜನರ ವಿಚಾರಗಳು ಹೆಚ್ಚು ಚೆರ್ಚೆಯಾಗಬೇಕು ಎಂದು ಹೇಳಿದರು.
ಧ್ವನಿ ಇಲ್ಲದವರ ಹಾಗೂ ಜನರ ವಿಚಾರದ ಬಗ್ಗೆ ಹೆಚ್ಚು ಅವಕಾಶ ದೊರೆಯಬೇಕು. ಸಂಸದೀಯ ವೇದಿಕೆಗಳಲ್ಲಿ ರಜೆಯ ವಿಚಾರ ಚರ್ಚೆಯಾಗುವುದಿಲ್ಲ ಎಂಬುದನ್ನು ದೂರ ಮಾಡಬೇಕು.
ಅಂಬೇಡ್ಕರ್ ಅವರು ಸಮಾನತೆ ಆಧಾರದ ಮೇಲೆ ಅಖಂಡ ಭಾರತ ಇರಬೇಕು ಎಂದು ಪ್ರತಿಪಾದಿಸಿದವರು. ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಶಾಸನ ಸಭೆ ಆರಂಭಗೊಂಡಿದ್ದು ಎಂದು ಅದರ ಇತಿಹಾಸವನ್ನು ಮೆಲುಕು ಹಾಕಿದರು.
ಹಣಕಾಸಿನ ವಿಚಾರದಲ್ಲೂ ಕೂಡ ಎಚ್ಚರಿಕೆಯಿಂದ ಇದ್ದವರು. ಪ್ರಾಮಾಣಿಕರಾಗಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ನಿಮ್ಮ ನೋವು ಹಂಚಿಕೊಳ್ಳಲು ನಿಮ್ಮೊಂದಿಗೆ ಇರುವುದಾಗಿ ಹೇಳಿ ರಮೇಶ್ಕುಮಾರ್ ನೂತನ ಸ್ಪೀಕರ್ ಅವರನ್ನು ಅಭಿನಂದಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…