Featured

ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ , ಇತ್ತ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು : ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದಾರೆ ಇತ್ತ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್,‌ ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರ ಮುಂದುವರೆದಿದ್ದು ಸರ್ಕಾರದ ವಿರುದ್ದ ಮತ್ತೆ ಚಾಟಿ ಬೀಸಿರುವ ಸಿದ್ದರಾಮಯ್ಯ ಅವರು, ”ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ. ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ. ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ” ಎಂದು ಹೇಳಿದ್ದಾರೆ.

”ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ, ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ?” ಎಂದು ಪ್ರಶ್ನಿಸಿರುವ ಅವರು, ”ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರೇ, ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago