ಮಂಗಳೂರು: ಕೊರೊನಾ ಪೂರ್ವದಲ್ಲಿದ್ದಂತೆಯೇ ಇಡೀ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಬಹುದೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದರೂ ಅದರ ಅನುಷ್ಠಾನಕ್ಕೆ ತಾಂತ್ರಿಕ ಸಮಸ್ಯೆಯೊಂದು ಎದುರಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಮೇಳಗಳಿಗೆ ಕೊರೊನಾ ಪೂರ್ವ ದಲ್ಲಿದ್ದಂತೆಯೇ ಇಡೀ ರಾತ್ರಿ ಪ್ರದರ್ಶ ನಕ್ಕೆ ಅನುಮತಿ ಕೋರಿ ಹೈಕೋರ್ಟ್ಗೆ ಕೃಷ್ಣ ಕುಮಾರ್ ಅವರು ಅರ್ಜಿ ಹಾಕಿ 15-11-2022ರ ಜಿಲ್ಲಾಧಿಕಾರಿಗಳ ಆದೇಶಕ್ಕೆ ತಡೆಯಾಜ್ಞೆ ಕೋರಿದ್ದರು. ಇದಕ್ಕೆ ಸಮ್ಮತಿಸಿರುವ ಹೈಕೋರ್ಟ್, ಶಬ್ದ ಮಾಲಿನ್ಯ ನಿಯಮಾವಳಿ-2000 ಅನ್ನು ಉಲ್ಲಂಘಿಸಬಾರದು ಎಂದು ಷರತ್ತು ಹಾಕಿದೆ. ಅರ್ಜಿದಾರರು ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಬೇಕು, ಅವರು ಈ ಆದೇಶದಲ್ಲಿನ ಅಂಶಗಳನ್ನು ಆಧರಿಸಿ ಕ್ರಮ ಕೈಗೊಳ್ಳಬಹುದು ಎಂದಿದೆ.
ಡೆಸಿಬೆಲ್ ಸಮಸ್ಯೆ
ಹೈಕೋರ್ಟ್ ಸಮ್ಮತಿಸಿದ್ದರೂ ಕಾರ್ಯ ಯೋಗ್ಯವಲ್ಲ ಎಂಬ ಅಭಿಪ್ರಾಯವಿದೆ. ಕಾರಣ ಇಲ್ಲಿ ಮುಖ್ಯ ಸಮಸ್ಯೆ ಡೆಸಿಬಲ್(ಡಿಬಿ)ನದ್ದು. ಜನರು ಮಾತನಾಡುವಾಗಿನ ಧ್ವನಿಯೇ 50 ಡಿಬಿ ಇರುತ್ತದೆ. ಚೆಂಡೆಯ ಪೆಟ್ಟು 200 ಡಿಬಿ, ಧ್ವನಿವರ್ಧಕದ ಡಿಬಿ ಕನಿಷ್ಠ 450-500 ರಷ್ಟಿರುತ್ತದೆ. ನಾವು ಈ ವಿಷಯದಲ್ಲಿ ಹಿಂದೆಯೇ ಸೌಂಡ್ ಎಂಜಿನಿಯರ್ಗಳೊಂದಿಗೆ ಸಮಾಲೋಚಿಸಿದ್ದೇವೆ. ಆದರೆ ಸುಪ್ರೀಂ ಕೋರ್ಟ್ನ ನಿರ್ದೇಶನದ ಅನ್ವಯ ರಾತ್ರಿ 10ರಿಂದ ಬೆಳಗ್ಗೆ 6 ರ ವರೆಗೆ 50 ಡೆಸಿಬೆಲ್ ಮೀರುವಂತಿಲ್ಲ, ಹಾಗಾಗಿ ಇದು ಕಷ್ಟ ಎನ್ನುತ್ತಾರೆ ಕಟೀಲು ಮೇಳಕ್ಕೆ ಸಂಬಂಧಿಸಿದವರು.
ಜಿಲ್ಲಾಧಿಕಾರಿಯವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಆಟಗಳು ಪರಂಪರೆ, ಸಂಪ್ರದಾಯ ದಂತೆ ನಡೆದುಕೊಂಡು ಬಂದಿರುವ ಸೇವೆ ಎನ್ನುವ ಅಂಶವನ್ನು ಗಮನದಲ್ಲಿರಿಸಿ ರಾತ್ರಿ 12.30ರ ವರೆಗೂ ಕಾಲಮಿತಿಯಲ್ಲಿ ವಿಶೇಷ ಪ್ರಕರಣವೆಂದು ಅನುಮತಿ ನೀಡಿದ್ದಾರೆ. ಈ ಮಧ್ಯೆ ಕಟೀಲು ಮೇಳವು ಕಳೆದ ವರ್ಷದಿಂದ ಕಾಲಮಿತಿ ಪ್ರದರ್ಶನ ಆರಂಭಿಸಿದ್ದು, ಈ ವರ್ಷದ ತಿರುಗಾಟಕ್ಕೂ ಚಾಲನೆ ನೀಡಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…