Featured

ಇಡೀ ರಾತ್ರಿ ಯಕ್ಷಗಾನಕ್ಕೆ ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ  – vishwanews24

ಇಡೀ ರಾತ್ರಿ ಯಕ್ಷಗಾನಕ್ಕೆ ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ

ಮಂಗಳೂರು: ಕೊರೊನಾ ಪೂರ್ವದಲ್ಲಿದ್ದಂತೆಯೇ ಇಡೀ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಬಹುದೆಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದ್ದರೂ ಅದರ ಅನುಷ್ಠಾನಕ್ಕೆ ತಾಂತ್ರಿಕ ಸಮಸ್ಯೆಯೊಂದು ಎದುರಾಗಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಮೇಳಗಳಿಗೆ ಕೊರೊನಾ ಪೂರ್ವ ದಲ್ಲಿದ್ದಂತೆಯೇ ಇಡೀ ರಾತ್ರಿ ಪ್ರದರ್ಶ ನಕ್ಕೆ ಅನುಮತಿ ಕೋರಿ ಹೈಕೋರ್ಟ್‌ಗೆ ಕೃಷ್ಣ ಕುಮಾರ್‌ ಅವರು ಅರ್ಜಿ ಹಾಕಿ 15-11-2022ರ ಜಿಲ್ಲಾಧಿಕಾರಿಗಳ ಆದೇಶಕ್ಕೆ ತಡೆಯಾಜ್ಞೆ ಕೋರಿದ್ದರು. ಇದಕ್ಕೆ ಸಮ್ಮತಿಸಿರುವ ಹೈಕೋರ್ಟ್‌, ಶಬ್ದ ಮಾಲಿನ್ಯ ನಿಯಮಾವಳಿ-2000 ಅನ್ನು ಉಲ್ಲಂಘಿಸಬಾರದು ಎಂದು ಷರತ್ತು ಹಾಕಿದೆ. ಅರ್ಜಿದಾರರು ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಬೇಕು, ಅವರು ಈ ಆದೇಶದಲ್ಲಿನ ಅಂಶಗಳನ್ನು ಆಧರಿಸಿ ಕ್ರಮ ಕೈಗೊಳ್ಳಬಹುದು ಎಂದಿದೆ.

ಡೆಸಿಬೆಲ್‌ ಸಮಸ್ಯೆ
ಹೈಕೋರ್ಟ್‌ ಸಮ್ಮತಿಸಿದ್ದರೂ ಕಾರ್ಯ ಯೋಗ್ಯವಲ್ಲ ಎಂಬ ಅಭಿಪ್ರಾಯವಿದೆ. ಕಾರಣ ಇಲ್ಲಿ ಮುಖ್ಯ ಸಮಸ್ಯೆ ಡೆಸಿಬಲ್‌(ಡಿಬಿ)ನದ್ದು. ಜನರು ಮಾತನಾಡುವಾಗಿನ ಧ್ವನಿಯೇ 50 ಡಿಬಿ ಇರುತ್ತದೆ. ಚೆಂಡೆಯ ಪೆಟ್ಟು 200 ಡಿಬಿ, ಧ್ವನಿವರ್ಧಕದ ಡಿಬಿ ಕನಿಷ್ಠ 450-500 ರಷ್ಟಿರುತ್ತದೆ. ನಾವು ಈ ವಿಷಯದಲ್ಲಿ ಹಿಂದೆಯೇ ಸೌಂಡ್‌ ಎಂಜಿನಿಯರ್‌ಗಳೊಂದಿಗೆ ಸಮಾಲೋಚಿಸಿದ್ದೇವೆ. ಆದರೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಅನ್ವಯ ರಾತ್ರಿ 10ರಿಂದ ಬೆಳಗ್ಗೆ 6 ರ ವರೆಗೆ 50 ಡೆಸಿಬೆಲ್‌ ಮೀರುವಂತಿಲ್ಲ, ಹಾಗಾಗಿ ಇದು ಕಷ್ಟ ಎನ್ನುತ್ತಾರೆ ಕಟೀಲು ಮೇಳಕ್ಕೆ ಸಂಬಂಧಿಸಿದವರು.

ಜಿಲ್ಲಾಧಿಕಾರಿಯವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಆಟಗಳು ಪರಂಪರೆ, ಸಂಪ್ರದಾಯ ದಂತೆ ನಡೆದುಕೊಂಡು ಬಂದಿರುವ ಸೇವೆ ಎನ್ನುವ ಅಂಶವನ್ನು ಗಮನದಲ್ಲಿರಿಸಿ ರಾತ್ರಿ 12.30ರ ವರೆಗೂ ಕಾಲಮಿತಿಯಲ್ಲಿ ವಿಶೇಷ ಪ್ರಕರಣವೆಂದು ಅನುಮತಿ ನೀಡಿದ್ದಾರೆ. ಈ ಮಧ್ಯೆ ಕಟೀಲು ಮೇಳವು ಕಳೆದ ವರ್ಷದಿಂದ ಕಾಲಮಿತಿ ಪ್ರದರ್ಶನ ಆರಂಭಿಸಿದ್ದು, ಈ ವರ್ಷದ ತಿರುಗಾಟಕ್ಕೂ ಚಾಲನೆ ನೀಡಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

11 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

13 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

13 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago