ಮಂಗಳೂರು: ಕೊರೊನಾ ಪೂರ್ವದಲ್ಲಿದ್ದಂತೆಯೇ ಇಡೀ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಬಹುದೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದರೂ ಅದರ ಅನುಷ್ಠಾನಕ್ಕೆ ತಾಂತ್ರಿಕ ಸಮಸ್ಯೆಯೊಂದು ಎದುರಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಮೇಳಗಳಿಗೆ ಕೊರೊನಾ ಪೂರ್ವ ದಲ್ಲಿದ್ದಂತೆಯೇ ಇಡೀ ರಾತ್ರಿ ಪ್ರದರ್ಶ ನಕ್ಕೆ ಅನುಮತಿ ಕೋರಿ ಹೈಕೋರ್ಟ್ಗೆ ಕೃಷ್ಣ ಕುಮಾರ್ ಅವರು ಅರ್ಜಿ ಹಾಕಿ 15-11-2022ರ ಜಿಲ್ಲಾಧಿಕಾರಿಗಳ ಆದೇಶಕ್ಕೆ ತಡೆಯಾಜ್ಞೆ ಕೋರಿದ್ದರು. ಇದಕ್ಕೆ ಸಮ್ಮತಿಸಿರುವ ಹೈಕೋರ್ಟ್, ಶಬ್ದ ಮಾಲಿನ್ಯ ನಿಯಮಾವಳಿ-2000 ಅನ್ನು ಉಲ್ಲಂಘಿಸಬಾರದು ಎಂದು ಷರತ್ತು ಹಾಕಿದೆ. ಅರ್ಜಿದಾರರು ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಬೇಕು, ಅವರು ಈ ಆದೇಶದಲ್ಲಿನ ಅಂಶಗಳನ್ನು ಆಧರಿಸಿ ಕ್ರಮ ಕೈಗೊಳ್ಳಬಹುದು ಎಂದಿದೆ.
ಡೆಸಿಬೆಲ್ ಸಮಸ್ಯೆ
ಹೈಕೋರ್ಟ್ ಸಮ್ಮತಿಸಿದ್ದರೂ ಕಾರ್ಯ ಯೋಗ್ಯವಲ್ಲ ಎಂಬ ಅಭಿಪ್ರಾಯವಿದೆ. ಕಾರಣ ಇಲ್ಲಿ ಮುಖ್ಯ ಸಮಸ್ಯೆ ಡೆಸಿಬಲ್(ಡಿಬಿ)ನದ್ದು. ಜನರು ಮಾತನಾಡುವಾಗಿನ ಧ್ವನಿಯೇ 50 ಡಿಬಿ ಇರುತ್ತದೆ. ಚೆಂಡೆಯ ಪೆಟ್ಟು 200 ಡಿಬಿ, ಧ್ವನಿವರ್ಧಕದ ಡಿಬಿ ಕನಿಷ್ಠ 450-500 ರಷ್ಟಿರುತ್ತದೆ. ನಾವು ಈ ವಿಷಯದಲ್ಲಿ ಹಿಂದೆಯೇ ಸೌಂಡ್ ಎಂಜಿನಿಯರ್ಗಳೊಂದಿಗೆ ಸಮಾಲೋಚಿಸಿದ್ದೇವೆ. ಆದರೆ ಸುಪ್ರೀಂ ಕೋರ್ಟ್ನ ನಿರ್ದೇಶನದ ಅನ್ವಯ ರಾತ್ರಿ 10ರಿಂದ ಬೆಳಗ್ಗೆ 6 ರ ವರೆಗೆ 50 ಡೆಸಿಬೆಲ್ ಮೀರುವಂತಿಲ್ಲ, ಹಾಗಾಗಿ ಇದು ಕಷ್ಟ ಎನ್ನುತ್ತಾರೆ ಕಟೀಲು ಮೇಳಕ್ಕೆ ಸಂಬಂಧಿಸಿದವರು.
ಜಿಲ್ಲಾಧಿಕಾರಿಯವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಆಟಗಳು ಪರಂಪರೆ, ಸಂಪ್ರದಾಯ ದಂತೆ ನಡೆದುಕೊಂಡು ಬಂದಿರುವ ಸೇವೆ ಎನ್ನುವ ಅಂಶವನ್ನು ಗಮನದಲ್ಲಿರಿಸಿ ರಾತ್ರಿ 12.30ರ ವರೆಗೂ ಕಾಲಮಿತಿಯಲ್ಲಿ ವಿಶೇಷ ಪ್ರಕರಣವೆಂದು ಅನುಮತಿ ನೀಡಿದ್ದಾರೆ. ಈ ಮಧ್ಯೆ ಕಟೀಲು ಮೇಳವು ಕಳೆದ ವರ್ಷದಿಂದ ಕಾಲಮಿತಿ ಪ್ರದರ್ಶನ ಆರಂಭಿಸಿದ್ದು, ಈ ವರ್ಷದ ತಿರುಗಾಟಕ್ಕೂ ಚಾಲನೆ ನೀಡಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…