ಗೋಕಾಕ: ‘ಅಸಾಧ್ಯವಾದುದು ಯಾವುದೂ ಇಲ್ಲ. ಛಲ ಇರಬೇಕು. ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು’ ಎಂದು ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಹೇಳಿದರು.
ಇಲ್ಲಿನ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಶೂನ್ಯ ಸಂಪಾದನಮಠದ 16ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಸೋಮವಾರ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ. ಅದಕ್ಕೆ ಎಲ್ಲಕ್ಕೂ ಮಿಗಿಲಾದ ಆದ್ಯತೆಯನ್ನು ನೀಡಿದಾಗ ಮಾತ್ರ ಅದನ್ನು ಸಂಪಾದಿಸಲು ಸಾಧ್ಯ. ನನ್ನಿಂದ ಏನೂ ಆಗುವುದಿಲ್ಲ ಎಂಬ ತಾತ್ಸಾರ ಮನೋಭಾವ ಬರಬಾರದು. ಎಲ್ಲವೂ ಸಾಧ್ಯವೆಂಬ ಮಹದಾಸೆ ಇರಬೇಕು. ಮನುಷ್ಯನ್ನು ಸೋಲಿಸುವ ವಸ್ತು ಈ ಜಗತ್ತಿನಲ್ಲಿ ಇಲ್ಲ. ಪ್ರಯತ್ನ ಮಾಡಿದರೆ ಏನು ಬೇಕಾದರೂ ಸಾಧಿಸಬಹುದು’ ಎಂದು ತಿಳಿಸಿದರು.
‘ಯುವಜನರು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣವನ್ನು ಅನವಶ್ಯವಾಗಿ ಬಳಸುವುದರಿಂದ ಅಂತರ ಕಾಯ್ದುಕೊಳ್ಳುವುದು ಇಂದಿನ ಅಗತ್ಯವಾಗಿದೆ’ ಎಂದರು.
ವಿವೇಕ ಜತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಎಸ್.ಕೆ. ಮಠದ ನಿರೂಪಿಸಿದರು. ಶಿಕ್ಷಕ ರಾಮಪ್ಪ ಮಿರ್ಜಿ ವಂದಿಸಿದರು.
ಟೂಲ್ ಕಿಟ್ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…