ರಾಷ್ಟ್ರ ನ್ಯೂಸ್

ಇತಿಹಾಸದಲ್ಲಿ ಮೊದಲ ಬಾರಿ ಹೊಸದೊಂದು‌ ದಾಖಲೆ ಬರೆದ ಮೋದಿ‌ ಸರ್ಕಾರ…

ಭಾರತೀಯರಿಗೆ ಮತ್ತು ರೈಲಿಗೆ ಅವಿನಾಭಾವ ಸಂಬಂಧವಿದೆ. ಭಾರತದಲ್ಲಿ ಅತೀ ಹೆಚ್ಚು ಜನ ನಂಬಿರುವುದು ರೈಲು ಸಾರಿಗೆಯನ್ನು.

ಎಪ್ರಿಲ್ 16,1853 ರಲ್ಲಿ ಮುಂಬೈ ಮತ್ತು ಥಾಣೆ ನಡುವೆ ಮೊದಲ ಪ್ರಯಾಣ ಮಾಡಿದ ರೈಲ್ವೆ ಇಂದು ದೇಶದ ಎಲ್ಲ ಭಾಗಗಳನ್ನು ಬೆಸೆಯುವ ಪ್ರಮುಖ ಕೊಂಡಿಯಾಗಿ ಬದಲಾಗಿದೆ.

ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈಲ್ವೆಯ ಚಿತ್ರಣವೂ ಬದಲಾಗಿಹೋಗಿದ್ದು ಟಿಕೆಟ್ ಬುಕಿಂಗ್, ಸ್ವಚ್ಛ ಹಾಸಿಗೆಗಳು, ಶುದ್ಧ ಊಟ, ಸ್ವಚ್ಛ ನೀರು ಎಲ್ಲಾ ವ್ಯವಸ್ಥೆಯೂ ಸರಳವಾಗಿಬಿಟ್ಟಿದೆ.
ಎನ್.ಡಿ.ಎ ಸರ್ಕಾರ ಅದರಲ್ಲೂ ಸುರೇಶ್ ಪ್ರಭು ರೈಲ್ವೆ ಸಚಿವರಾದ ಮೇಲೆ ಬದಲಾವಣೆಯ ಗಾಳಿಯೇ ಬೀಸಿದೆ. ಭಾರತೀಯ ರೈಲ್ವೆ ಜನರಿಗೆ ಮತ್ತಷ್ಟು ಹತ್ತಿರವಾಗಿದೆ. ಕೇವಲ ಒಂದು ಟ್ವೀಟ್ ಮೂಲಕ ಸಮಸ್ಯೆಗೆ ಸ್ಪಂದಿಸಿದ ಅದೆಷ್ಟೋ ಉದಾಹರಣೆಗಳಿವೆ. ಉತ್ತರ ಪ್ರದೇಶದಲ್ಲಿ ನಡೆದ ರೈಲು ಅಪಘಾತಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಸುರೇಶ್ ಪ್ರಭು ಅವರ ಕಾರ್ಯವೈಖರಿ ವಿರೋಧಿಗಳೂ ಮೆಚ್ಚಬೇಕಾಗಿತ್ತು ಅಂತಹ ಕಾರ್ಯದಕ್ಷತೆ! ಅವರ ನಂತರ ಬಂದ ಪಿಯೂಷ್ ಗೋಯೇಲ್ ರ ಬಗ್ಗೆ ಹೇಳುವುದೇ ಬೇಡ. ಅತ್ಯಂತ ಕ್ರಿಯಾಶೀಲ ಸಚಿವ ಇವರು.

ಇದೀಗ ರೈಲ್ವೇ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಕಂಡು ಪ್ರಗತಿಯತ್ತ ಹೆಜ್ಜೆ ಹಾಕಿ ಜನಸಾಮಾನ್ಯರಲ್ಲಿ ಭರವಸೆ ಹುಟ್ಟಿಸಿದೆ. ಸುರಕ್ಷತೆಯ ಭಾವನೆ ಮೂಡಿಸಿದೆ. ರೈಲ್ವೇ ಇಲಾಖೆಗೆಂದೇ ಪ್ರತ್ಯೇಕ ಬಜೆಟ್ ಮಂಡಿಸುತ್ತಿದ್ದರೂ ಸುರಕ್ಷತೆಯ ಬಗ್ಗೆ ಅಷ್ಟು ಕಾಳಜಿ ಈ ಹಿಂದಿನ ಸರ್ಕಾರಗಳು ತೋರಿಸುತ್ತಿರಲಿಲ್ಲ ಆದರೆ ಮೋದಿ ಸರ್ಕಾರ ಜನಸಾಮಾನ್ಯರ ಜೀವನಾಡಿಯಾದ ರೈಲು ಪ್ರಯಾಣವನ್ನು ಸುಖಕರ ಮತ್ತು ಸುರಕ್ಷಿತಗೊಳಿಸಿದೆ.

 

ಹೌದು, 2017-18 ರ ಆರ್ಥಿಕ ವರ್ಷ ಕೊನೆಗೊಂಡ ಬೆನ್ನಲ್ಲೇ ರೈಲ್ವೇ ಇಲಾಖೆ ಅತ್ಯಂತ ಸಂತೋಷದ ಸುದ್ದಿಯೊಂದನ್ನು ಹೊರಹಾಕಿದೆ. ಸುದೀರ್ಘ 35 ವರ್ಷಗಳ ಬಳಿಕ ಎರಡಂಕೆಯ ಒಳಗೆ ಅಪಘಾತ ಪ್ರಮಾಣ ದಾಖಲಾಗಿದೆ. ಸದಾ ಒಂದಲ್ಲ ಒಂದು ಅವಘಗಡಕ್ಕೆ ಈಡಾಗುತ್ತಿದ್ದ ರೈಲು ಈಗ ತನ್ನ ಅಪಘಾತದ ಪ್ರಮಾಣವನ್ನು ತಗ್ಗಿಸಿಕೊಂಡಿದೆ. ಪ್ರತಿವರ್ಷ ನೂರಕ್ಕೂ ಮೇಲೆ ನಡೆಯುತ್ತಿದ್ದ ಅಪಘಾತ ಈ ವರ್ಷ ಗಣನೀಯ ಇಳಿಕೆ ಕಂಡಿದೆ. 2017-18 ರ ಆರ್ಥಿಕ ವರ್ಷಾಂತ್ಯಕ್ಕೆ 73 ರೈಲು ಅಪಘಾತಗಳು ದೇಶದಲ್ಲಿ ನಡೆದಿದ್ದು ಇದೇ ಮೊದಲ ಬಾರಿಗೆ ಅತೀ ಕಡಿಮೆ ಅಪಘಾತ ಸಂಭವಿಸಿದ ವರ್ಷವಾಗಿದೆ. 2016-17 ಕ್ಕೆ ಹೋಲಿಸಿದರೆ ಶೇಕಡಾ 29 ಅಪಘಾತ ಕಡಿಮೆ ಆಗಿದೆ ಅಂದರೆ 2016-17 ರಲ್ಲಿ ನಡೆದ ಒಟ್ಟು ಅಪಘಾತಗಳ ಸಂಖ್ಯೆ 104!

 

ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಬಿಡುಗಡೆಗೊಳಿಸಿದ ರೈಲ್ವೇ ಇಲಾಖೆಯ ಮುಖ್ಯ ಅಧಿಕಾರಿ ಅಶ್ವನಿ ಲೋಹಾನಿ ರೈಲ್ವೇಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿರುವುದರಿಂದ ಅಪಘಾತದ ಪ್ರಮಾಣ ಕಡಿಮೆ ಆಗಿದೆ ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago