ರಾಷ್ಟ್ರ ನ್ಯೂಸ್

ಇತಿಹಾಸದಲ್ಲಿ ಮೊದಲ ಬಾರಿ ಹೊಸದೊಂದು‌ ದಾಖಲೆ ಬರೆದ ಮೋದಿ‌ ಸರ್ಕಾರ…

ಭಾರತೀಯರಿಗೆ ಮತ್ತು ರೈಲಿಗೆ ಅವಿನಾಭಾವ ಸಂಬಂಧವಿದೆ. ಭಾರತದಲ್ಲಿ ಅತೀ ಹೆಚ್ಚು ಜನ ನಂಬಿರುವುದು ರೈಲು ಸಾರಿಗೆಯನ್ನು.

ಎಪ್ರಿಲ್ 16,1853 ರಲ್ಲಿ ಮುಂಬೈ ಮತ್ತು ಥಾಣೆ ನಡುವೆ ಮೊದಲ ಪ್ರಯಾಣ ಮಾಡಿದ ರೈಲ್ವೆ ಇಂದು ದೇಶದ ಎಲ್ಲ ಭಾಗಗಳನ್ನು ಬೆಸೆಯುವ ಪ್ರಮುಖ ಕೊಂಡಿಯಾಗಿ ಬದಲಾಗಿದೆ.

ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈಲ್ವೆಯ ಚಿತ್ರಣವೂ ಬದಲಾಗಿಹೋಗಿದ್ದು ಟಿಕೆಟ್ ಬುಕಿಂಗ್, ಸ್ವಚ್ಛ ಹಾಸಿಗೆಗಳು, ಶುದ್ಧ ಊಟ, ಸ್ವಚ್ಛ ನೀರು ಎಲ್ಲಾ ವ್ಯವಸ್ಥೆಯೂ ಸರಳವಾಗಿಬಿಟ್ಟಿದೆ.
ಎನ್.ಡಿ.ಎ ಸರ್ಕಾರ ಅದರಲ್ಲೂ ಸುರೇಶ್ ಪ್ರಭು ರೈಲ್ವೆ ಸಚಿವರಾದ ಮೇಲೆ ಬದಲಾವಣೆಯ ಗಾಳಿಯೇ ಬೀಸಿದೆ. ಭಾರತೀಯ ರೈಲ್ವೆ ಜನರಿಗೆ ಮತ್ತಷ್ಟು ಹತ್ತಿರವಾಗಿದೆ. ಕೇವಲ ಒಂದು ಟ್ವೀಟ್ ಮೂಲಕ ಸಮಸ್ಯೆಗೆ ಸ್ಪಂದಿಸಿದ ಅದೆಷ್ಟೋ ಉದಾಹರಣೆಗಳಿವೆ. ಉತ್ತರ ಪ್ರದೇಶದಲ್ಲಿ ನಡೆದ ರೈಲು ಅಪಘಾತಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಸುರೇಶ್ ಪ್ರಭು ಅವರ ಕಾರ್ಯವೈಖರಿ ವಿರೋಧಿಗಳೂ ಮೆಚ್ಚಬೇಕಾಗಿತ್ತು ಅಂತಹ ಕಾರ್ಯದಕ್ಷತೆ! ಅವರ ನಂತರ ಬಂದ ಪಿಯೂಷ್ ಗೋಯೇಲ್ ರ ಬಗ್ಗೆ ಹೇಳುವುದೇ ಬೇಡ. ಅತ್ಯಂತ ಕ್ರಿಯಾಶೀಲ ಸಚಿವ ಇವರು.

ಇದೀಗ ರೈಲ್ವೇ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಕಂಡು ಪ್ರಗತಿಯತ್ತ ಹೆಜ್ಜೆ ಹಾಕಿ ಜನಸಾಮಾನ್ಯರಲ್ಲಿ ಭರವಸೆ ಹುಟ್ಟಿಸಿದೆ. ಸುರಕ್ಷತೆಯ ಭಾವನೆ ಮೂಡಿಸಿದೆ. ರೈಲ್ವೇ ಇಲಾಖೆಗೆಂದೇ ಪ್ರತ್ಯೇಕ ಬಜೆಟ್ ಮಂಡಿಸುತ್ತಿದ್ದರೂ ಸುರಕ್ಷತೆಯ ಬಗ್ಗೆ ಅಷ್ಟು ಕಾಳಜಿ ಈ ಹಿಂದಿನ ಸರ್ಕಾರಗಳು ತೋರಿಸುತ್ತಿರಲಿಲ್ಲ ಆದರೆ ಮೋದಿ ಸರ್ಕಾರ ಜನಸಾಮಾನ್ಯರ ಜೀವನಾಡಿಯಾದ ರೈಲು ಪ್ರಯಾಣವನ್ನು ಸುಖಕರ ಮತ್ತು ಸುರಕ್ಷಿತಗೊಳಿಸಿದೆ.

 

ಹೌದು, 2017-18 ರ ಆರ್ಥಿಕ ವರ್ಷ ಕೊನೆಗೊಂಡ ಬೆನ್ನಲ್ಲೇ ರೈಲ್ವೇ ಇಲಾಖೆ ಅತ್ಯಂತ ಸಂತೋಷದ ಸುದ್ದಿಯೊಂದನ್ನು ಹೊರಹಾಕಿದೆ. ಸುದೀರ್ಘ 35 ವರ್ಷಗಳ ಬಳಿಕ ಎರಡಂಕೆಯ ಒಳಗೆ ಅಪಘಾತ ಪ್ರಮಾಣ ದಾಖಲಾಗಿದೆ. ಸದಾ ಒಂದಲ್ಲ ಒಂದು ಅವಘಗಡಕ್ಕೆ ಈಡಾಗುತ್ತಿದ್ದ ರೈಲು ಈಗ ತನ್ನ ಅಪಘಾತದ ಪ್ರಮಾಣವನ್ನು ತಗ್ಗಿಸಿಕೊಂಡಿದೆ. ಪ್ರತಿವರ್ಷ ನೂರಕ್ಕೂ ಮೇಲೆ ನಡೆಯುತ್ತಿದ್ದ ಅಪಘಾತ ಈ ವರ್ಷ ಗಣನೀಯ ಇಳಿಕೆ ಕಂಡಿದೆ. 2017-18 ರ ಆರ್ಥಿಕ ವರ್ಷಾಂತ್ಯಕ್ಕೆ 73 ರೈಲು ಅಪಘಾತಗಳು ದೇಶದಲ್ಲಿ ನಡೆದಿದ್ದು ಇದೇ ಮೊದಲ ಬಾರಿಗೆ ಅತೀ ಕಡಿಮೆ ಅಪಘಾತ ಸಂಭವಿಸಿದ ವರ್ಷವಾಗಿದೆ. 2016-17 ಕ್ಕೆ ಹೋಲಿಸಿದರೆ ಶೇಕಡಾ 29 ಅಪಘಾತ ಕಡಿಮೆ ಆಗಿದೆ ಅಂದರೆ 2016-17 ರಲ್ಲಿ ನಡೆದ ಒಟ್ಟು ಅಪಘಾತಗಳ ಸಂಖ್ಯೆ 104!

 

ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಬಿಡುಗಡೆಗೊಳಿಸಿದ ರೈಲ್ವೇ ಇಲಾಖೆಯ ಮುಖ್ಯ ಅಧಿಕಾರಿ ಅಶ್ವನಿ ಲೋಹಾನಿ ರೈಲ್ವೇಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿರುವುದರಿಂದ ಅಪಘಾತದ ಪ್ರಮಾಣ ಕಡಿಮೆ ಆಗಿದೆ ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago