Featured

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉಡುಪಿಯಲ್ಲಿ 15 ದಿನಗಳ ಕಾಲ ಅತಿರುದ್ರ ಮಹಾಯಾಗ – Vishwanews24

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉಡುಪಿಯಲ್ಲಿ 15 ದಿನಗಳ ಕಾಲ ಅತಿರುದ್ರ ಮಹಾಯಾಗ

ಉಡುಪಿ: ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅಪೂರ್ವ ಧಾರ್ಮಿಕ ಕಾರ್ಯಕ್ರಮವನ್ನು ನಡೆಯುತ್ತಿದೆ. 15 ದಿನಗಳ ನಿರಂತರ ಕಾರ್ಯಕ್ರಮದಲ್ಲಿ 2 ಲಕ್ಷ ಭಕ್ತರು ಭಾಗಿಯಾಗಲಿದ್ದಾರೆ. ಗಂಗೆಗೆ ನಡೆಯುವ ಮಾದರಿಯ ಆರತಿ ಕೈಲಾಸವಾಸಿ ಶಿವ ನಿಗೆ ಆಗಲಿದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಉಡುಪಿ ಯಲ್ಲಿ ಅತಿ ರುದ್ರ ಮಹಾಯಾಗ ನಡೆಯುತ್ತಿದೆ. ಮಣಿಪಾಲ ಸಮೀಪದ ಸರಳಬೆಟ್ಟು ಶ್ರೀ ಉಮಾಮಹೇಶ್ವರಿ ದೇವಸ್ಥಾನ  ದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಆರಂಭವಾಗಿದೆ. ಬರೋಬ್ಬರಿ 15 ದಿನಗಳ ಕಾಲ ನಡೆಯುವ ಅತಿ ರುದ್ರ ಮಹಾಯಾಗದಲ್ಲಿ 150 ಜನ ಋತ್ವಿಜರು ರುದ್ರಪಠಣ, ಯಾಗ- ಹೋಮದಲ್ಲಿ ಭಾಗಿಯಾಗಿದ್ದಾರೆ.

ಶೈವ ಪರಂಪರೆ ಮಾದರಿಯಲ್ಲಿ ಪೂಜೆ ಪುನಸ್ಕಾರ ಹೋಮ ಮಂತ್ರ ಪಠಣ ಯಾಗಗಳು ನಡೆಯುತ್ತಿದೆ. ಪ್ರತಿ ರುದ್ರಪಠಣದ ನಂತರ ಈಶ್ವರ ದೇವರಿಗೆ ಕಲಾ ಸೇವೆ ನಡೆಯುತ್ತಿದೆ. ಸಂಗೀತ ಭರತನಾಟ್ಯ, ಯಕ್ಷಗಾನ ಸೇವೆಯನ್ನು ದೇವರಿಗೆ ಸಮರ್ಪಿಸಲಾಗುತ್ತಿದೆ. ಮುಂಜಾನೆಯಿಂದ ರಾತ್ರಿಯತನಕ ನಿರಂತರ ಅನ್ನದಾನ ಫಲಹಾರಗಳು ಸುಮಾರು 2 ಲಕ್ಷ ಜನಕ್ಕೆ ಏರ್ಪಾಟು ಮಾಡಲಾಗಿದೆ.

ಅತಿ ರುದ್ರ ಮಹಾಯಾಗದ ಮತ್ತೊಂದು ಆಕರ್ಷಣೆ ಶಿವಾರತಿ ಗಂಗಾವತಿಯ ಮಾದರಿಯಲ್ಲೇ ಶಿವಾರತಿಯನ್ನು ದೇವರಿಗೆ ಸಮರ್ಪಣೆ ಮಾಡಲಾಗುತ್ತಿದೆ. ಉಡುಪಿ ನಡೆಯುತ್ತಿರುವ ಅತಿ ರುದ್ರ ಮಹಾಯಾಗಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ದೇಶದ ಕೆಲ ಭಾಗಗಳಿಂದ ಉತ್ತರ ಭಾರತದಿಂದ ಭಕ್ತರು ಬರುತ್ತಿದ್ದಾರೆ. ಶೃಂಗೇರಿ ಸ್ವಾಮೀಜಿಗಳ ನೇತೃತ್ವದಲ್ಲಿ ಅತಿರುದ್ರ ಮಹಾಯಾಗದ ಪೂರ್ಣಾವತಿ ನಡೆಯಲಿದೆ. ಜೀವಿತಾವಧಿಯಲ್ಲಿ ಒಂದು ಬಾರಿಯಾದರೂ ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಬೇಕು ಎಂಬ ನಂಬಿಕೆಯಿದೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago