ಉಡುಪಿ: ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅಪೂರ್ವ ಧಾರ್ಮಿಕ ಕಾರ್ಯಕ್ರಮವನ್ನು ನಡೆಯುತ್ತಿದೆ. 15 ದಿನಗಳ ನಿರಂತರ ಕಾರ್ಯಕ್ರಮದಲ್ಲಿ 2 ಲಕ್ಷ ಭಕ್ತರು ಭಾಗಿಯಾಗಲಿದ್ದಾರೆ. ಗಂಗೆಗೆ ನಡೆಯುವ ಮಾದರಿಯ ಆರತಿ ಕೈಲಾಸವಾಸಿ ಶಿವ ನಿಗೆ ಆಗಲಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಉಡುಪಿ ಯಲ್ಲಿ ಅತಿ ರುದ್ರ ಮಹಾಯಾಗ ನಡೆಯುತ್ತಿದೆ. ಮಣಿಪಾಲ ಸಮೀಪದ ಸರಳಬೆಟ್ಟು ಶ್ರೀ ಉಮಾಮಹೇಶ್ವರಿ ದೇವಸ್ಥಾನ ದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಆರಂಭವಾಗಿದೆ. ಬರೋಬ್ಬರಿ 15 ದಿನಗಳ ಕಾಲ ನಡೆಯುವ ಅತಿ ರುದ್ರ ಮಹಾಯಾಗದಲ್ಲಿ 150 ಜನ ಋತ್ವಿಜರು ರುದ್ರಪಠಣ, ಯಾಗ- ಹೋಮದಲ್ಲಿ ಭಾಗಿಯಾಗಿದ್ದಾರೆ.
ಶೈವ ಪರಂಪರೆ ಮಾದರಿಯಲ್ಲಿ ಪೂಜೆ ಪುನಸ್ಕಾರ ಹೋಮ ಮಂತ್ರ ಪಠಣ ಯಾಗಗಳು ನಡೆಯುತ್ತಿದೆ. ಪ್ರತಿ ರುದ್ರಪಠಣದ ನಂತರ ಈಶ್ವರ ದೇವರಿಗೆ ಕಲಾ ಸೇವೆ ನಡೆಯುತ್ತಿದೆ. ಸಂಗೀತ ಭರತನಾಟ್ಯ, ಯಕ್ಷಗಾನ ಸೇವೆಯನ್ನು ದೇವರಿಗೆ ಸಮರ್ಪಿಸಲಾಗುತ್ತಿದೆ. ಮುಂಜಾನೆಯಿಂದ ರಾತ್ರಿಯತನಕ ನಿರಂತರ ಅನ್ನದಾನ ಫಲಹಾರಗಳು ಸುಮಾರು 2 ಲಕ್ಷ ಜನಕ್ಕೆ ಏರ್ಪಾಟು ಮಾಡಲಾಗಿದೆ.
ಅತಿ ರುದ್ರ ಮಹಾಯಾಗದ ಮತ್ತೊಂದು ಆಕರ್ಷಣೆ ಶಿವಾರತಿ ಗಂಗಾವತಿಯ ಮಾದರಿಯಲ್ಲೇ ಶಿವಾರತಿಯನ್ನು ದೇವರಿಗೆ ಸಮರ್ಪಣೆ ಮಾಡಲಾಗುತ್ತಿದೆ. ಉಡುಪಿ ನಡೆಯುತ್ತಿರುವ ಅತಿ ರುದ್ರ ಮಹಾಯಾಗಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ದೇಶದ ಕೆಲ ಭಾಗಗಳಿಂದ ಉತ್ತರ ಭಾರತದಿಂದ ಭಕ್ತರು ಬರುತ್ತಿದ್ದಾರೆ. ಶೃಂಗೇರಿ ಸ್ವಾಮೀಜಿಗಳ ನೇತೃತ್ವದಲ್ಲಿ ಅತಿರುದ್ರ ಮಹಾಯಾಗದ ಪೂರ್ಣಾವತಿ ನಡೆಯಲಿದೆ. ಜೀವಿತಾವಧಿಯಲ್ಲಿ ಒಂದು ಬಾರಿಯಾದರೂ ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಬೇಕು ಎಂಬ ನಂಬಿಕೆಯಿದೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…