Featured

ಇತಿಹಾಸದಲ್ಲೇ ಮೊದಲ ಬಾರಿಗೆ ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಆಸ್ಟ್ರೇಲಿಯನ್‌ ಸೆನೆಟರ್‌  – Vishwanews24

ಇತಿಹಾಸದಲ್ಲೇ ಮೊದಲ ಬಾರಿಗೆ ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಆಸ್ಟ್ರೇಲಿಯನ್‌ ಸೆನೆಟರ್‌

ಸಿಡ್ನಿ ( Vishwanews24): ಭಾರತೀಯ ಮೂಲದ ಆಸ್ಟ್ರೇಲಿಯನ್‌ ಸೆನೆಟರ್‌ ಒಬ್ಬರು “ಇತಿಹಾಸದಲ್ಲೇ ಮೊದಲ ಬಾರಿಗೆ ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ” ಸ್ವೀಕರಿಸಿ ಇತಿಹಾಸ ಸೃಷ್ಟಿಸಿದ್ದಾರೆ.

ಭಾರತೀಯ ಮೂಲದ ಬ್ಯಾರಿಸ್ಟರ್‌ ವರುಣ್‌ ಘೋಷ್‌ ಅವರು ಮಂಗಳವಾರ ಆಸ್ಟ್ರೇಲಿಯಾದ ಸಂಸತ್ತಿನಲ್ಲಿ ಭಗವದ್ಗೀತೆಯ ಮೇಲೆ ಕೈಯಿಟ್ಟು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ಹೀಗೆ ಮಾಡಿದ ಮೊದಲ ಭಾರತ ಸಂಜಾತ ಸದಸ್ಯರಾಗಿದ್ದಾರೆ.

ಪಶ್ಚಿಮ ಆಸ್ಟ್ರೇಲಿಯಾದಿಂದ ಬಂದಿರುವ ವರುಣ್‌, ಫೆಡರಲ್ ಸಂಸತ್ತಿನ ಸೆನೆಟ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಾರೆ. ಲೆಜಿಸ್ಲೇಟಿವ್ ಅಸೆಂಬ್ಲಿ ಮತ್ತು ಲೆಜಿಸ್ಲೇಟಿವ್ ಕೌನ್ಸಿಲ್ ಎರಡರಿಂದಲೂ ಬೆಂಬಲವನ್ನು ಪಡೆದ ನಂತರ ಘೋಷ್ ಅವರನ್ನು ಸೆನೆಟರ್ ಆಗಿ ನೇಮಿಸಲಾಯಿತು.

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ವರುಣ್‌ಗೆ ಶುಭ ಹಾರೈಸಿದ್ದಾರೆ. “ಪಶ್ಚಿಮ ಆಸ್ಟ್ರೇಲಿಯಾದ ನಮ್ಮ ಹೊಸ ಸೆನೆಟರ್ ವರುಣ್‌ ಘೋಷ್ ಅವರಿಗೆ ಸ್ವಾಗತ. ತಂಡದಲ್ಲಿ ನಿಮ್ಮನ್ನು ಹೊಂದಲು ಸಂತೋಷವಾಗಿದೆ” ಎಂದು ಅವರು Xನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅವರು ಘೋಷ್ ಅವರನ್ನು ಲೇಬರ್ ಸೆನೆಟ್ ತಂಡಕ್ಕೆ ಸ್ವಾಗತಿಸಿದರು. “ಪಶ್ಚಿಮ ಆಸ್ಟ್ರೇಲಿಯಾದ ನಮ್ಮ ಹೊಸ ಸೆನೆಟರ್ ವರುಣ್‌ ಘೋಷ್ ಅವರಿಗೆ ಸುಸ್ವಾಗತ. ಸೆನೆಟರ್‌ ಘೋಷ್ ಅವರು ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಆಸ್ಟ್ರೇಲಿಯಾದ ಸೆನೆಟರ್ ಆಗಿದ್ದಾರೆ. ನಾನು ಆಗಾಗ್ಗೆ ಹೇಳುತ್ತಿದ್ದೆ, ನೀವು ಯಾವುದಾದರೂ ವಿಷಯದಲ್ಲಿ ಮೊದಲಿಗರಾದಾಗ, ನೀವು ಕೊನೆಯವರೂ ಅಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಸೆನೆಟರ್‌ ಘೋಷ್ ಅವರ ಸಮುದಾಯಕ್ಕೆ ಮತ್ತು ಪಶ್ಚಿಮ ಆಸ್ಟ್ರೇಲಿಯನ್ನರಿಗೆ ಬಲವಾದ ಧ್ವನಿಯಾಗುತ್ತಾರೆ” ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

15 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago