ಉಡುಪಿ

ಇತಿಹಾಸದಲ್ಲೇ ಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಸಿಬಿಐಗೆ ಅನುಮತಿ -Vishwanews24

ಹೊಸದಿಲ್ಲಿ: ಭಾರತದ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಸಿಬಿಐಗೆ ಅನುಮತಿ ನೀಡಿದ್ದಾರೆ. ಖಾಸಗಿ ಕಾಲೇಜುಗಳಿಗೆ ಎಂಬಿಬಿಎಸ್ ದಾಖಲಾತಿಗೆ ನ್ಯಾಯಮೂರ್ತಿ ಶುಕ್ಲಾ ಅನುಕೂಲ ಮಾಡಿಕೊಟ್ಟಿದ್ದರು ಎನ್ನುವುದು ಅವರ ಮೇಲಿರುವ ಆರೋಪ.

ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಸೂಕ್ತ ಪುರಾವೆಯನ್ನು ಸಲ್ಲಿಸಿ, ಸಿಜೆಐಯವರಿಂದ ಅನುಮತಿ ಪಡೆಯದೇ ಯಾವುದೇ ತನಿಖಾ ಸಂಸ್ಥೆಗಳು ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಮಾರು 30 ವರ್ಷಗಳ ಹಿಂದೆ ಅಂದರೆ 1991ರ ಜುಲೈ 25ರಂದು ಕೆ.ವೀರಸ್ವಾಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.

ಇದಕ್ಕೆ ಮುನ್ನ ಕೂಡಾ ತನಿಖಾ ಸಂಸ್ಥೆಗಳು ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ತನಿಖೆ ನಡೆಸಿದ ನಿದರ್ಶನಗಳಿಲ್ಲ. ಇದೇ ಮೊದಲ ಬಾರಿಗೆ ಸಿಜೆಐಯವರು ಹಾಲಿ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ನೀಡಿದ್ದಾರೆ. ನ್ಯಾಯಮೂರ್ತಿ ಶುಕ್ಲಾ ವಿರುದ್ಧ ಸಿಬಿಐ ತಕ್ಷಣ ಪ್ರಕರಣ ದಾಖಲಿಸಿದ್ದು, ಅವರಿಗೆ ಬಂಧನದ ಭೀತಿ ಎದುರಾಗಿದೆ.

ನ್ಯಾಯಮೂರ್ತಿ ಶುಕ್ಲಾ ಅವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ತನಿಖಾ ಸಂಸ್ಥೆ ಸಿಜೆಐಯವರಿಗೆ ಪತ್ರ ಬರೆದಿತ್ತು. “ಹಿಂದಿನ ಸಿಜೆಐ ದೀಪಕ್ ಮಿಶ್ರಾ ಅವರ ಸಲಹೆಯಂತೆ ಉತ್ತರ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ನ್ಯಾಯಮೂರ್ತಿ ನಾರಾಯಣ ಶುಕ್ಲಾ ಮತ್ತು ಇತರರ ವಿರುದ್ಧ ಪ್ರಾಥಮಿಕ ತನಿಖೆ (ಪಿಇ) ದಾಖಲಿಸಲಾಗಿತ್ತು” ಎಂದು ಸಿಬಿಐ ನಿರ್ದೇಶಕರು ಪತ್ರದಲ್ಲಿ ಸ್ಪಷ್ಟಪಡಿಸಿದ್ದರು.

ಕಳೆದ ತಿಂಗಳು ಸಿಜೆಐಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ನ್ಯಾಯಮೂರ್ತಿ ಶುಕ್ಲಾ ಅವರನ್ನು ವಜಾಗೊಳಿಸಲು ಸಂಸತ್ತಿನಲ್ಲಿ ನಿರ್ಣಯ ಮಂಡಿಸಬೇಕು ಎಂದು ಕೋರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

18 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

19 hours ago