ಉಡುಪಿ

ಇತಿಹಾಸದಲ್ಲೇ ಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಸಿಬಿಐಗೆ ಅನುಮತಿ -Vishwanews24

ಹೊಸದಿಲ್ಲಿ: ಭಾರತದ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಸಿಬಿಐಗೆ ಅನುಮತಿ ನೀಡಿದ್ದಾರೆ. ಖಾಸಗಿ ಕಾಲೇಜುಗಳಿಗೆ ಎಂಬಿಬಿಎಸ್ ದಾಖಲಾತಿಗೆ ನ್ಯಾಯಮೂರ್ತಿ ಶುಕ್ಲಾ ಅನುಕೂಲ ಮಾಡಿಕೊಟ್ಟಿದ್ದರು ಎನ್ನುವುದು ಅವರ ಮೇಲಿರುವ ಆರೋಪ.

ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಸೂಕ್ತ ಪುರಾವೆಯನ್ನು ಸಲ್ಲಿಸಿ, ಸಿಜೆಐಯವರಿಂದ ಅನುಮತಿ ಪಡೆಯದೇ ಯಾವುದೇ ತನಿಖಾ ಸಂಸ್ಥೆಗಳು ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಮಾರು 30 ವರ್ಷಗಳ ಹಿಂದೆ ಅಂದರೆ 1991ರ ಜುಲೈ 25ರಂದು ಕೆ.ವೀರಸ್ವಾಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.

ಇದಕ್ಕೆ ಮುನ್ನ ಕೂಡಾ ತನಿಖಾ ಸಂಸ್ಥೆಗಳು ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ತನಿಖೆ ನಡೆಸಿದ ನಿದರ್ಶನಗಳಿಲ್ಲ. ಇದೇ ಮೊದಲ ಬಾರಿಗೆ ಸಿಜೆಐಯವರು ಹಾಲಿ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ನೀಡಿದ್ದಾರೆ. ನ್ಯಾಯಮೂರ್ತಿ ಶುಕ್ಲಾ ವಿರುದ್ಧ ಸಿಬಿಐ ತಕ್ಷಣ ಪ್ರಕರಣ ದಾಖಲಿಸಿದ್ದು, ಅವರಿಗೆ ಬಂಧನದ ಭೀತಿ ಎದುರಾಗಿದೆ.

ನ್ಯಾಯಮೂರ್ತಿ ಶುಕ್ಲಾ ಅವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ತನಿಖಾ ಸಂಸ್ಥೆ ಸಿಜೆಐಯವರಿಗೆ ಪತ್ರ ಬರೆದಿತ್ತು. “ಹಿಂದಿನ ಸಿಜೆಐ ದೀಪಕ್ ಮಿಶ್ರಾ ಅವರ ಸಲಹೆಯಂತೆ ಉತ್ತರ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ನ್ಯಾಯಮೂರ್ತಿ ನಾರಾಯಣ ಶುಕ್ಲಾ ಮತ್ತು ಇತರರ ವಿರುದ್ಧ ಪ್ರಾಥಮಿಕ ತನಿಖೆ (ಪಿಇ) ದಾಖಲಿಸಲಾಗಿತ್ತು” ಎಂದು ಸಿಬಿಐ ನಿರ್ದೇಶಕರು ಪತ್ರದಲ್ಲಿ ಸ್ಪಷ್ಟಪಡಿಸಿದ್ದರು.

ಕಳೆದ ತಿಂಗಳು ಸಿಜೆಐಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ನ್ಯಾಯಮೂರ್ತಿ ಶುಕ್ಲಾ ಅವರನ್ನು ವಜಾಗೊಳಿಸಲು ಸಂಸತ್ತಿನಲ್ಲಿ ನಿರ್ಣಯ ಮಂಡಿಸಬೇಕು ಎಂದು ಕೋರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago