ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ 5 ವರ್ಷಗಳಲ್ಲಿ ದೇಶ ದೊಡ್ಡ ತರ್ತು ಪರಿಸ್ಥಿತಿಯನ್ನು ಕಂಡಿತ್ತು ಎಂದು ಟೀಕಿಸಿದ್ದಾರೆ.
ಇಂದು, 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಘೋಷಿಸಿದ್ದ ತುರ್ತು ಪರಿಸ್ಥಿತಿಯ ವಾರ್ಷಿಕೋತ್ಸವ ದಿನವಾಗಿದೆ. ಕಳೆದ 5 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕೂಡ ದೊಡ್ಡ ತುರ್ತುಪರಿಸ್ಥಿತಿಯನ್ನು ನಾವೆಲ್ಲಾ ಎದುರಿಸಿದ್ದೇವೆ. ಇತಿಹಾಸದಿಂದ ಪಾಠ ಕಲಿತು ನಾವು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
1975ರ ಜೂನ್ 25ರಂದು ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಘೋಷಿಸಿದ್ದ ತುರ್ತು ಪರಿಸ್ಥಿತಿಗೆ 44ನೇ ವರ್ಷವಾಗಿದೆ. 1975ರಿಂದ 1977ರವರೆಗೆ 19 ತಿಂಗಳು ನಮ್ಮ ದೇಶ ತುರ್ತು ಪರಿಸ್ಥಿತಿ ಎದುರಿಸಿತ್ತು. ನಂತರ 1977ರ ಮಾರ್ಚ್ 21ರಂದು ಹಿಂತೆಗೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಚುನಾವಣೆಯನ್ನು ರದ್ದುಪಡಿಸಿ ನಾಗರಿಕ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲಾಗಿತ್ತು. ಸ್ವತಂತ್ರ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ವಿವಾದಿತ ಸಮಯವಾಗಿತ್ತು.
ಈ ಸಂದರ್ಭವನ್ನು ಪ್ರಧಾನಿ ಮೋದಿಯವರು ಕೂಡ ಇಂದು ಸ್ಮರಿಸಿದ್ದು, ತುರ್ತು ಪರಿಸ್ಥಿತಿಯನ್ನು ಉಗ್ರವಾಗಿ ಮತ್ತು ಧೈರ್ಯವಾಗಿ ವಿರೋಧಿಸಿದವರು ನಿಜಕ್ಕೂ ಪ್ರಶಂಸನೀಯರು. ಭಾರತದ ಪ್ರಜಾಪ್ರಭುತ್ವದ ನೀತಿಗಳು ಸರ್ವಾಧಿಕಾರಿ ಮನಸ್ಥಿತಿಯ ಮೇಲೆ ಯಶಸ್ವಿಯಾಗಿ ಮೇಲುಗೈ ಸಾಧಿಸಿದವು ಎಂದು ಸ್ಮರಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…