ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ 5 ವರ್ಷಗಳಲ್ಲಿ ದೇಶ ದೊಡ್ಡ ತರ್ತು ಪರಿಸ್ಥಿತಿಯನ್ನು ಕಂಡಿತ್ತು ಎಂದು ಟೀಕಿಸಿದ್ದಾರೆ.
ಇಂದು, 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಘೋಷಿಸಿದ್ದ ತುರ್ತು ಪರಿಸ್ಥಿತಿಯ ವಾರ್ಷಿಕೋತ್ಸವ ದಿನವಾಗಿದೆ. ಕಳೆದ 5 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕೂಡ ದೊಡ್ಡ ತುರ್ತುಪರಿಸ್ಥಿತಿಯನ್ನು ನಾವೆಲ್ಲಾ ಎದುರಿಸಿದ್ದೇವೆ. ಇತಿಹಾಸದಿಂದ ಪಾಠ ಕಲಿತು ನಾವು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
1975ರ ಜೂನ್ 25ರಂದು ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಘೋಷಿಸಿದ್ದ ತುರ್ತು ಪರಿಸ್ಥಿತಿಗೆ 44ನೇ ವರ್ಷವಾಗಿದೆ. 1975ರಿಂದ 1977ರವರೆಗೆ 19 ತಿಂಗಳು ನಮ್ಮ ದೇಶ ತುರ್ತು ಪರಿಸ್ಥಿತಿ ಎದುರಿಸಿತ್ತು. ನಂತರ 1977ರ ಮಾರ್ಚ್ 21ರಂದು ಹಿಂತೆಗೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಚುನಾವಣೆಯನ್ನು ರದ್ದುಪಡಿಸಿ ನಾಗರಿಕ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲಾಗಿತ್ತು. ಸ್ವತಂತ್ರ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ವಿವಾದಿತ ಸಮಯವಾಗಿತ್ತು.
ಈ ಸಂದರ್ಭವನ್ನು ಪ್ರಧಾನಿ ಮೋದಿಯವರು ಕೂಡ ಇಂದು ಸ್ಮರಿಸಿದ್ದು, ತುರ್ತು ಪರಿಸ್ಥಿತಿಯನ್ನು ಉಗ್ರವಾಗಿ ಮತ್ತು ಧೈರ್ಯವಾಗಿ ವಿರೋಧಿಸಿದವರು ನಿಜಕ್ಕೂ ಪ್ರಶಂಸನೀಯರು. ಭಾರತದ ಪ್ರಜಾಪ್ರಭುತ್ವದ ನೀತಿಗಳು ಸರ್ವಾಧಿಕಾರಿ ಮನಸ್ಥಿತಿಯ ಮೇಲೆ ಯಶಸ್ವಿಯಾಗಿ ಮೇಲುಗೈ ಸಾಧಿಸಿದವು ಎಂದು ಸ್ಮರಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…