ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ 5 ವರ್ಷಗಳಲ್ಲಿ ದೇಶ ದೊಡ್ಡ ತರ್ತು ಪರಿಸ್ಥಿತಿಯನ್ನು ಕಂಡಿತ್ತು ಎಂದು ಟೀಕಿಸಿದ್ದಾರೆ.
ಇಂದು, 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಘೋಷಿಸಿದ್ದ ತುರ್ತು ಪರಿಸ್ಥಿತಿಯ ವಾರ್ಷಿಕೋತ್ಸವ ದಿನವಾಗಿದೆ. ಕಳೆದ 5 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕೂಡ ದೊಡ್ಡ ತುರ್ತುಪರಿಸ್ಥಿತಿಯನ್ನು ನಾವೆಲ್ಲಾ ಎದುರಿಸಿದ್ದೇವೆ. ಇತಿಹಾಸದಿಂದ ಪಾಠ ಕಲಿತು ನಾವು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
1975ರ ಜೂನ್ 25ರಂದು ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಘೋಷಿಸಿದ್ದ ತುರ್ತು ಪರಿಸ್ಥಿತಿಗೆ 44ನೇ ವರ್ಷವಾಗಿದೆ. 1975ರಿಂದ 1977ರವರೆಗೆ 19 ತಿಂಗಳು ನಮ್ಮ ದೇಶ ತುರ್ತು ಪರಿಸ್ಥಿತಿ ಎದುರಿಸಿತ್ತು. ನಂತರ 1977ರ ಮಾರ್ಚ್ 21ರಂದು ಹಿಂತೆಗೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಚುನಾವಣೆಯನ್ನು ರದ್ದುಪಡಿಸಿ ನಾಗರಿಕ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲಾಗಿತ್ತು. ಸ್ವತಂತ್ರ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ವಿವಾದಿತ ಸಮಯವಾಗಿತ್ತು.
ಈ ಸಂದರ್ಭವನ್ನು ಪ್ರಧಾನಿ ಮೋದಿಯವರು ಕೂಡ ಇಂದು ಸ್ಮರಿಸಿದ್ದು, ತುರ್ತು ಪರಿಸ್ಥಿತಿಯನ್ನು ಉಗ್ರವಾಗಿ ಮತ್ತು ಧೈರ್ಯವಾಗಿ ವಿರೋಧಿಸಿದವರು ನಿಜಕ್ಕೂ ಪ್ರಶಂಸನೀಯರು. ಭಾರತದ ಪ್ರಜಾಪ್ರಭುತ್ವದ ನೀತಿಗಳು ಸರ್ವಾಧಿಕಾರಿ ಮನಸ್ಥಿತಿಯ ಮೇಲೆ ಯಶಸ್ವಿಯಾಗಿ ಮೇಲುಗೈ ಸಾಧಿಸಿದವು ಎಂದು ಸ್ಮರಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…