Featured

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ – Vishwanews24

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ

ಲಾಸನ್‌: ಫಿನಿಕ್ಸ್​ನಂತೆ ಎದ್ದು ಬಂದಿರುವ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದು ಕೊಂಡಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಜಾವೆಲಿನ್‌ ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ನೀರಜ್‌ 89.04 ಮೀ. ಸಾಧನೆಯೊಂದಿಗೆ ಮೊದಲ ಸ್ಥಾನ ಪಡೆದರು. ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ಗೌರವಕ್ಕೆ ನೀರಜ್‌ ಪಾತ್ರರಾಗಿದ್ದಾರೆ. ಈ ಜಯದೊಂದಿಗೆ ಮುಂದಿನ ತಿಂಗಳು ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ನೀರಜ್‌ ಅರ್ಹತೆ ಪಡೆದಿದ್ದಾರೆ. ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಉರುಳಿಸಿದ ನಗರ ಸಭೆ : ಸ್ಥಳೀಯರಿಂದ ಆಕ್ರೋಶ -Vishwanews24 

ಮೊದಲ ಪ್ರಯತ್ನದಲ್ಲೇ ನೀರಜ್‌ ಈ ಸಾಧನೆ ಮಾಡಿದ್ದು ವಿಶೇಷ. ಜೇಕಬ್‌ ವಾಡ್ಲೆಚ್‌ (85.88 ಮೀ.) ಎರಡನೇ ಸ್ಥಾನ ಪಡೆದರೆ, ಅಮೆರಿಕದ ಕರ್ಟಿಸ್‌ ಥಾಂಪ್ಸನ್‌ (83.72 ಮೀ.) ಮೂರನೇ ಸ್ಥಾನ ಗಳಿಸಿದರು. ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಬಳಿಕ ಇವರು ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಕಾಮನ್​ವೆಲ್ತ್​ ಗೇಮ್ಸ್​ನಿಂದ ಕೂಡ ಹೊರಗುಳಿಯ ಬೇಕಾಯಿತು. ಇದೀಗ ಸ್ವಿಸ್​​ನ ಡೈಮಂಡ್​ ಲೀಗ್​ನಲ್ಲಿ 89.08 ಮೀಟರ್​ ದೂರ ಜಾವೆಲಿನ್​ ಎಸೆಯುವ ಮೂಲಕ ಪ್ರಶಸ್ತಿ ಜಯಿಸಿಕೊಂಡಿದ್ದಾರೆ.

ಈ ಗೆಲುವಿನೊಂದಿಗೆ ನೀರಜ್ ಚೋಪ್ರಾ ಸೆಪ್ಟೆಂಬರ್ 7 ಮತ್ತು 8 ರಂದು ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, 2023 ರ ವಿಶ್ವ ಚಾಂಪಿಯನ್‌ಶಿಪ್‌ಗೆ ನೀರಜ್ ಅರ್ಹತೆ ಪಡೆದಿದ್ದಾರೆ. ಉಡುಪಿ : ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago