Featured

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ – Vishwanews24

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ

ಲಾಸನ್‌: ಫಿನಿಕ್ಸ್​ನಂತೆ ಎದ್ದು ಬಂದಿರುವ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದು ಕೊಂಡಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಜಾವೆಲಿನ್‌ ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ನೀರಜ್‌ 89.04 ಮೀ. ಸಾಧನೆಯೊಂದಿಗೆ ಮೊದಲ ಸ್ಥಾನ ಪಡೆದರು. ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ಗೌರವಕ್ಕೆ ನೀರಜ್‌ ಪಾತ್ರರಾಗಿದ್ದಾರೆ. ಈ ಜಯದೊಂದಿಗೆ ಮುಂದಿನ ತಿಂಗಳು ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ನೀರಜ್‌ ಅರ್ಹತೆ ಪಡೆದಿದ್ದಾರೆ. ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಉರುಳಿಸಿದ ನಗರ ಸಭೆ : ಸ್ಥಳೀಯರಿಂದ ಆಕ್ರೋಶ -Vishwanews24 

ಮೊದಲ ಪ್ರಯತ್ನದಲ್ಲೇ ನೀರಜ್‌ ಈ ಸಾಧನೆ ಮಾಡಿದ್ದು ವಿಶೇಷ. ಜೇಕಬ್‌ ವಾಡ್ಲೆಚ್‌ (85.88 ಮೀ.) ಎರಡನೇ ಸ್ಥಾನ ಪಡೆದರೆ, ಅಮೆರಿಕದ ಕರ್ಟಿಸ್‌ ಥಾಂಪ್ಸನ್‌ (83.72 ಮೀ.) ಮೂರನೇ ಸ್ಥಾನ ಗಳಿಸಿದರು. ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಬಳಿಕ ಇವರು ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಕಾಮನ್​ವೆಲ್ತ್​ ಗೇಮ್ಸ್​ನಿಂದ ಕೂಡ ಹೊರಗುಳಿಯ ಬೇಕಾಯಿತು. ಇದೀಗ ಸ್ವಿಸ್​​ನ ಡೈಮಂಡ್​ ಲೀಗ್​ನಲ್ಲಿ 89.08 ಮೀಟರ್​ ದೂರ ಜಾವೆಲಿನ್​ ಎಸೆಯುವ ಮೂಲಕ ಪ್ರಶಸ್ತಿ ಜಯಿಸಿಕೊಂಡಿದ್ದಾರೆ.

ಈ ಗೆಲುವಿನೊಂದಿಗೆ ನೀರಜ್ ಚೋಪ್ರಾ ಸೆಪ್ಟೆಂಬರ್ 7 ಮತ್ತು 8 ರಂದು ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, 2023 ರ ವಿಶ್ವ ಚಾಂಪಿಯನ್‌ಶಿಪ್‌ಗೆ ನೀರಜ್ ಅರ್ಹತೆ ಪಡೆದಿದ್ದಾರೆ. ಉಡುಪಿ : ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago