Featured

ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟ ಅರಂಭ , ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ..Vishwanews24

ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟ ಅರಂಭ , ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ..Vishwanews24

ಮಂಗಳೂರು: ಇತಿಹಾಸ ಪ್ರಸಿದ್ಧ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಈ ಬಾರಿ ತಿರುಗಾಟ ಅರಂಭಗೊಂಡಿದೆ ಇಂದು ಶ್ರೀ ಕ್ಷೇತ್ರ ಕಟೀಲಿನಲ್ಲಿ ದೇವರ ಗರ್ಭಗುಡಿಯ ಮುಂದೆ ಮೇಳದ ಕಲಾವಿದರಿಗೆ ಕ್ಷೇತ್ರದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಗೆಜ್ಜೆಗಳನ್ನು ನೀಡುವ ಮೂಲಕ ಈ ಬಾರಿಯ ಯಕ್ಷಗಾನ ತಿರುಗಾಟಕ್ಕೆ ಚಾಲನೆ ದೊರೆತಿದೆ.

ದುರ್ಗಾಪರಮೇಶ್ವರಿ ಅಮ್ಮನವರಿಗೆ ತಾಳ ಮದ್ದಳೆ ಹಾಗೂ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಬಳಿಕ ದೇವರ ಪೆಟ್ಟಿಗೆಯೊಂದಿಗೆ ಸರಸ್ವತಿ ಸದನದಲ್ಲಿ ಚೌಕಿಗೆ ಅಗಮಿಸಿ ಬಳಿಕ ಚೌಕಿ ಪೂಜೆಯ ಬಳಿಕ ಸೇವೆಯಾಟ ಅರಂಭಗೊಂಡಿತ್ತು.ಶ್ರೀ ಕ್ಷೇತ್ರ ಕಟೀಲಿಗೆ ದೇವರ ಸೇವೆಯಾಟವನ್ನು ನೋಡಲು ಭಕ್ತ ಸಾಗರವೇ ಹರಿದುಬಂದಿತ್ತು .

ಮೇ ತಿಂಗಳ 25 ವರೆಗೆ ಯಕ್ಷಗಾನ ಸೇವೆ ನಡೆಯಲಿದೆ ಅರು ಮೇಳಗಳು ಇದ್ರೂ ಸಹ ಸುಮಾರು 20 ವರ್ಷಗಳ ಕಾಲ ಯಕ್ಷಗಾನ ಸೇವೆ ಬುಕ್ ಅಗಿವೆ. ಇದು ದೇವಿಯ ಮಹಿಮೆ ಹಾಗೂ ಹೆಮ್ಮೆಯ ವಿಷಯ 2020_21 ಸಾಲಿನ ಯಕ್ಷಗಾನ ತಿರುಗಾಟ 167 ದಿನಗಳ ಕಾಲ ನಡೆಯಲಿದೆ ಎಂದರು..

ಯಕ್ಷಗಾನ ಪ್ರಿಯೆ’ ಕಟೀಲು ಶ್ರೀ ದುರ್ಗೆಗೆ ಹೇಳುವ ಅತಿ ದೊಡ್ಡ ಯಕ್ಷಗಾನ ಸೇವೆ. ಆದ್ದರಿಂದ ಭಕ್ತರು ತಮ್ಮ ಬಯಕೆ, ಇಷ್ಟಾರ್ಥ ಸಿದ್ಧಿಗೆ ತಾಯಿಗೆ ಯಕ್ಷಗಾನ ಸೇವೆಯನ್ನು ನೀಡುತ್ತೇವೆ ಎಂದು ಹರಕೆ ಹೊರುತ್ತಾರೆ. ಯಕ್ಷಗಾನ ನಡೆಯುವಲ್ಲಿ ಕಟೀಲು ಶ್ರೀ ದೇವಿಯೇ ಬರುತ್ತಾಳೆ ಎಂಬ ನಂಬಿಕೆಯಿದೆ. ಕಾರ್ತಿಕ ಬಹುಳ ಪಂಚಮಿಯಂದು ಕಟೀಲು ದೀಪೋತ್ಸವ ನಡೆಯುತ್ತದೆ. ಇದಾಗಿ ದೇವರ ತಾರಾನುಕೂಲವಾಗುವ ದಿನ ಮೇಳಗಳು ಹೊರಡುತ್ತವೆ. ವೃಷಭ ಸಂಕ್ರಮಣದ ಬಳಿಕ 11 ನೇ ದಿನದಂದು (ಮೇ 25 ರ ಸುಮಾರಿಗೆ) ವರ್ಷದ ತಿರುಗಾಟ (ಜೈತ್ರಯಾತ್ರೆ) ಮುಕ್ತಾಯವಾಗುತ್ತದೆ. ಶ್ರೀದೇವಿ ಸಮ್ಮುಖದಲ್ಲಿ ಕಲಾವಿದರು ಗಜ್ಜೆಕಟ್ಟಿ ಕುಣಿಯುತ್ತಾರೆ. ಬಳಿಕ ಕಲಾವಿದರು ದೇವಸ್ಥಾನದ ಪ್ರಾಂಗಣದಲ್ಲಿನ ಆರೂ ರಂಗಸ್ಥಳಗಳಲ್ಲಿ ಯಕ್ಷಗಾನ ಪ್ರದರ್ಶಿಸುತ್ತಾರೆ. ಬಳಿಕ ಆರು ಮೇಳಗಳ ತಿರುಗಾಟ ಮುಂದಿನ ಆರು ತಿಂಗಳ ಕಾಲ ನೆರವೇರುತ್ತದೆ.

ಕಟೀಲು ಮೇಳದಲ್ಲಿ ‘ಶ್ರೀ ದೇವಿ ಮಹಾತ್ಮೆ’ ಪ್ರಸಂಗಕ್ಕೆ ವಿಶೇಷ ಪ್ರಾಶಸ್ತ್ಯವಿದ್ದು, ಒಂದೊಂದು ಮೇಳಗಳಲ್ಲಿಯೂ ವರ್ಷಕ್ಕೆ ಕನಿಷ್ಠ 90-100 ರಷ್ಟು ಇದೇ ಪ್ರಸಂಗವನ್ನು ಆಡಿಸಲಾಗುತ್ತದೆ. ಉಳಿದಂತೆ ‘ಶ್ರೀದೇವಿ ಲಲಿತೋಪಾಖ್ಯಾನ’, ಕಟೀಲು ಕ್ಷೇತ್ರ ಮಹಾತ್ಮೆ ಸೇರಿದಂತೆ ಎಲ್ಲಾ ಪೌರಾಣಿಕ ಪ್ರಸಂಗಗಳನ್ನು ಆಡಿಸಲಾಗುತ್ತದೆ.

ಕಟೀಲು ದೇವಳದ ಅರ್ಚಕರಾದ ಹರಿನಾರಾಯಣ ಆಸ್ರಣ್ಣ ಮಾತನಾಡಿ, ಕಲೆಯ ಮೂಲಕ ಆರಾಧನೆ ಮಾಡುವ ದೃಷ್ಟಿಯಿಂದ ಅತ್ಯಂತ ಶಿಸ್ತುಬದ್ಧವಾದ ಹಾಗೂ ರಾತ್ರಿಯಲ್ಲೂ ಎಚ್ಚರಿಕೆಯಿಂದ ಇರಿಸುವ ಕಲೆ ಯಕ್ಷಗಾನ. ಕಟೀಲು ಶ್ರೀದುರ್ಗೆಗೆ ಯಕ್ಷಗಾನವೆಂದರೆ ಬಲು ಪ್ರೀತಿ. ದೇವಳದ ಕವಾಟ ಬಂಧನದ ಬಳಿಕ ದೇವಿಯು ಯಕ್ಷಗಾನ ನೋಡಲೆಂದು ತೆರಳುತ್ತಾಳೆಂಬುದು ನಂಬಿಕೆ. ಆದ್ದರಿಂದ ಎಲ್ಲರು ತಮ್ಮ ಮನೆಗೆ ಕಟೀಲು ಮಾತೆ ಆಗಮಿಸಬೇಕೆಂದು ಯಕ್ಷಗಾನ ಪ್ರದರ್ಶನ ಮಾಡುವ ಮೂಲಕ ದೇವಿಯ ಆರಾಧನೆ ಮಾಡುತ್ತಾರೆ ಎಂದರು.

ಕಟೀಲು ಯಕ್ಷಗಾನ ಮಂಡಳಿಯಲ್ಲಿ ಆರು ಮೇಳಗಳಿದ್ದರೂ 20 ವರ್ಷಕ್ಕೆ ಯಕ್ಷಗಾನ ಮುಂಗಡ ಬುಕ್ಕಿಂಗ್ ಆಗಿದೆ. ನಿನ್ನೆಯಿಂದ ಮೇಳದ ತಿರುಗಾಟ ಆರಂಭವಾಗಿದ್ದು, ಮುಂದಿನ 167 ದಿನಗಳ ಕಾಲ ಯಕ್ಷಗಾನ ತಿರುಗಾಟ ನಡೆಯುತ್ತದೆ. ವೃಷಭ ಮಾಸದ ಹನ್ನೊಂದನೇ ದಿನ ದೇವರು ಒಳ ಪ್ರವೇಶಿಸುತ್ತಾರೆ. ಅದಕ್ಕಿಂತ ಮೊದಲು ದೇವರಿಗೆ ಒಳ ಪ್ರವೇಶವಿಲ್ಲ ಎಂದು ಹೇಳಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

22 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

22 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

23 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

23 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago