Featured

ಇತಿಹಾಸ ಪ್ರಸಿದ್ಧ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ , ಫೆ. 14 ರಿಂದ ಫೆ 18ರ ವರೆಗೆ ಸಾನಿಧ್ಯ ಕಲಶಾಭಿಷೇಕ -Vishwanews24

ಇತಿಹಾಸ ಪ್ರಸಿದ್ಧ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ , ಫೆ. 14 ರಿಂದ ಫೆ 18ರ ವರೆಗೆ ಸಾನಿಧ್ಯ ಕಲಶಾಭಿಷೇಕ -Vishwanews24

ಹೆಜಮಾಡಿ: ಇತಿಹಾಸ ಪ್ರಸಿದ್ಧ ೯೦೦ ವರ್ಷದ ಐತಿಹ್ಯ ಇರುವ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳವು ಜೀರ್ಣೋದ್ಧಾರಗೊಳ್ಳುತ್ತಿದ್ದು, ಫೆ. ೧೪ರಿಂದ ಫೆ ೧೮ರ ವರೆಗೆ ಸಾನಿಧ್ಯ ಕಲಶಾಭಿಷೇಕ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ದಯಾನಂದ ಹೆಜ್ಮಾಡಿ ಹೇಳಿದ್ದಾರೆ.

ಅವರು ದೇವಳದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಕಳೆದ ವರ್ಷ ಸಂಪೂರ್ಣ ಪುನಃನಿರ್ಮಾಣ ಮಾಡಬೇಕೆಂದು ಗ್ರಾಮದ ಜನರೆಲ್ಲರೂ ಆಶಿಸಿ, ದೇವಳದ ಜೀರ್ಣೋದ್ಧಾರ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ. ಸರಿಸುಮಾರು ೧೦ ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡುವ ಬಗ್ಗೆ ತೀರ್ಮಾನಿಸಿದ್ದೇವೆ. ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ದೇವಳದ ತಂತ್ರಿಗಳಾದ ವೇದಮೂರ್ತಿ ರಾಧಾಕೃಷ್ಣ ತಂತ್ರಿಯವರ ನಿರ್ದೇಶನದಂತೆ ಕೆಲಸ ಕಾರ್ಯ ನಡೆಯುತ್ತಿದೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಂತ್ ಶೆಟ್ಟಿ ಪೂಣೆ ಹಾಗೂ ಸರ್ವ ಸದಸ್ಯರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ.

ಇದನ್ನೂ ಓದಿ : ತಂದೆ ತಾಯಿಯ ನೆನಪಿಗಾಗಿ ದೇವಾಲಯ ಕಟ್ಟಿಸಿ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಆಧುನಿಕ ಶ್ರವಣಕುಮಾರ ಎನಿಸಿಕೊಂಡ ಮಗ -Vishwanews24

ದೇವಳದ ಕೆಲಸಗಳನ್ನು ವಿಭಾಗಗಳಾಗಿ ಹಂಚಿ ನೀಡಿದ್ದರ ಫಲವಾಗಿ ಸಮಯಕ್ಕೆ ಸರಿಯಾಗಿ ಕೆಲಸ ನಡೆಯುತ್ತಿದೆ. ಫೆಬ್ರವರಿ ೧೪ರಿಂದ ಫೆ ೧೮ರ ವರೆಗೆ ಸಾನಿಧ್ಯ ಕಲಶಾಭಿಷೇಕ ಪ್ರಕ್ರಿಯೆ ನಡೆಯಲಿದೆ ಎಂದರು.

ಈ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಜೊತೆಕಾರ್ಯದರ್ಶಿ ಪ್ರಭೋಧ್ ಹೆಜ್ಮಾಡಿ, ಸದಸ್ಯ ರವೀಂದ್ರ ಎನ್ ಕೋಟ್ಯಾನ್, ಪ್ರಧಾನ ಅರ್ಚಕ ಪದ್ಮಾನಾಭ ಭಟ್ ಮತ್ತಿತರರು ಉಪಸ್ಥರಿದ್ದರು

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

19 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

19 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

19 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

19 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

19 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

20 hours ago