Featured

ಇತಿಹಾಸ ಪ್ರಸಿದ್ಧ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ , ಫೆ. 14 ರಿಂದ ಫೆ 18ರ ವರೆಗೆ ಸಾನಿಧ್ಯ ಕಲಶಾಭಿಷೇಕ -Vishwanews24

ಇತಿಹಾಸ ಪ್ರಸಿದ್ಧ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ , ಫೆ. 14 ರಿಂದ ಫೆ 18ರ ವರೆಗೆ ಸಾನಿಧ್ಯ ಕಲಶಾಭಿಷೇಕ -Vishwanews24

ಹೆಜಮಾಡಿ: ಇತಿಹಾಸ ಪ್ರಸಿದ್ಧ ೯೦೦ ವರ್ಷದ ಐತಿಹ್ಯ ಇರುವ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳವು ಜೀರ್ಣೋದ್ಧಾರಗೊಳ್ಳುತ್ತಿದ್ದು, ಫೆ. ೧೪ರಿಂದ ಫೆ ೧೮ರ ವರೆಗೆ ಸಾನಿಧ್ಯ ಕಲಶಾಭಿಷೇಕ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ದಯಾನಂದ ಹೆಜ್ಮಾಡಿ ಹೇಳಿದ್ದಾರೆ.

ಅವರು ದೇವಳದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಕಳೆದ ವರ್ಷ ಸಂಪೂರ್ಣ ಪುನಃನಿರ್ಮಾಣ ಮಾಡಬೇಕೆಂದು ಗ್ರಾಮದ ಜನರೆಲ್ಲರೂ ಆಶಿಸಿ, ದೇವಳದ ಜೀರ್ಣೋದ್ಧಾರ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ. ಸರಿಸುಮಾರು ೧೦ ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡುವ ಬಗ್ಗೆ ತೀರ್ಮಾನಿಸಿದ್ದೇವೆ. ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ದೇವಳದ ತಂತ್ರಿಗಳಾದ ವೇದಮೂರ್ತಿ ರಾಧಾಕೃಷ್ಣ ತಂತ್ರಿಯವರ ನಿರ್ದೇಶನದಂತೆ ಕೆಲಸ ಕಾರ್ಯ ನಡೆಯುತ್ತಿದೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಂತ್ ಶೆಟ್ಟಿ ಪೂಣೆ ಹಾಗೂ ಸರ್ವ ಸದಸ್ಯರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ.

ಇದನ್ನೂ ಓದಿ : ತಂದೆ ತಾಯಿಯ ನೆನಪಿಗಾಗಿ ದೇವಾಲಯ ಕಟ್ಟಿಸಿ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಆಧುನಿಕ ಶ್ರವಣಕುಮಾರ ಎನಿಸಿಕೊಂಡ ಮಗ -Vishwanews24

ದೇವಳದ ಕೆಲಸಗಳನ್ನು ವಿಭಾಗಗಳಾಗಿ ಹಂಚಿ ನೀಡಿದ್ದರ ಫಲವಾಗಿ ಸಮಯಕ್ಕೆ ಸರಿಯಾಗಿ ಕೆಲಸ ನಡೆಯುತ್ತಿದೆ. ಫೆಬ್ರವರಿ ೧೪ರಿಂದ ಫೆ ೧೮ರ ವರೆಗೆ ಸಾನಿಧ್ಯ ಕಲಶಾಭಿಷೇಕ ಪ್ರಕ್ರಿಯೆ ನಡೆಯಲಿದೆ ಎಂದರು.

ಈ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಜೊತೆಕಾರ್ಯದರ್ಶಿ ಪ್ರಭೋಧ್ ಹೆಜ್ಮಾಡಿ, ಸದಸ್ಯ ರವೀಂದ್ರ ಎನ್ ಕೋಟ್ಯಾನ್, ಪ್ರಧಾನ ಅರ್ಚಕ ಪದ್ಮಾನಾಭ ಭಟ್ ಮತ್ತಿತರರು ಉಪಸ್ಥರಿದ್ದರು

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

44 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

1 hour ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

1 hour ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago