ಮುಂಬೈ: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಭಾರತೀಯ ಚಿತ್ರರಂಗವನ್ನು ಆಘಾತಕ್ಕೆ ದೂಡಿದೆ. ಕನ್ನಡದ ಪವರ್ ಸ್ಟಾರ್ ನಿಧನಕ್ಕೆ ಅನ್ಯ ಭಾಷೆಯ ನಟರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಅವರು ‘ಇದು ಕರಾಳ ದಿನ’ ಎಂದಿದ್ದಾರೆ.
ಪುನೀತ್ ಸಾವಿಗೆ ಸಂತಾಪ ಸೂಚಿಸಿ ಬಿಗ್ ಬಿ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. “ಕನ್ನಡ ಚಿತ್ರರಂಗದ ದಿಗ್ಗಜ ರಾಜ್ ಕುಮಾರ್ ಅವರ ಕಿರಿಯ ಪುತ್ರ, ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾದರು. ಅವರಿಗೆ ಕೇವಲ 46 ವರ್ಷಗಳಾಗಿತ್ತು ಇದು ನಮಗೆಲ್ಲರಿಗೂ ತೀವ್ರ ಆಘಾತವನ್ನುಂಟು ಮಾಡಿದೆ ದಿವಂಗತ ರಾಜ್ ಕುಮಾರ್ ಅವರ ಕುಟುಂಬ ನಮಗೆ ಯಾವತ್ತೂ ತುಂಬಾ ಹತ್ತಿರವಾಗಿದ್ದರು ಎಂದು ಬಿಗ್ ಬಿ ಬರೆದಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಸಾವಿಗೆ ಅಮಿತಾಭ್ ಬಚ್ಚನ್ ಅವರು ಟ್ವಿಟ್ಟರ್ನಲ್ಲಿಯೂ ಸಂತಾಪ ಸೂಚಿಸಿದ್ದಾರೆ. “ಕರಾಳ ಮತ್ತು ಪ್ರಾರ್ಥನೆಯ ದಿನ .. ಕುಟುಂಬಕ್ಕೆ ಹತ್ತಿರವಿರುವ ಇಬ್ಬರು ಇಂದು ನಿಧನರಾದರು .. ಇದು ತುಂಬಾ ಕತ್ತಲೆಯಾಗಿದೆ” ಎಂದಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…