Featured

ಇದು ಕೇಸ್ ಅಲ್ಲ ಷಡ್ಯಂತರ ಹಾಗೂ ಕುತಂತ್ರ : ಜೈಲಿನಿಂದ ಬಿಡುಗಡೆಯಾದ ಸೂರಜ್ ರೇವಣ್ಣ ಪ್ರತಿಕ್ರಿಯೆ – vishwanews24

ಇದು ಕೇಸ್ ಅಲ್ಲ ಷಡ್ಯಂತರ ಹಾಗೂ ಕುತಂತ್ರ : ಜೈಲಿನಿಂದ ಬಿಡುಗಡೆಯಾದ ಸೂರಜ್ ರೇವಣ್ಣ ಪ್ರತಿಕ್ರಿಯೆ

ಬೆಂಗಳೂರು : ನಮ್ಮ ಕುಟುಂಬದ ವಿರುದ್ಧ ಷಡ್ಯಂತರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ ಎಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದರು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಎಂಎಲ್ಸಿ ಸೂರಜ್ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿ ಆದೇಶ ನೀಡಿತ್ತು. ಹಾಗಾಗಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬಳಿಕ ಅವರು ಮಾತನಾಡಿದರು.

ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ಜೈಲಿನಿಂದ ಬಿಡುಗಡೆ ಬಳಿಕ ಎಂಎಲ್ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದು, ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ.ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ. ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದರು.

ಇದು ಕೇಸ್ ಅಲ್ಲ ಷಡ್ಯಂತರ ಹಾಗೂ ಕುತಂತ್ರ. ಶಿವಕುಮಾರ್ ಆಪ್ತ ಸಹಾಯಕನಲ್ಲ ಕಾರು ಚಾಲಕನು ಅಲ್ಲ. ನಮಗೆ ಲೋಕೇಶ್ ಅಂತ ಒಬ್ಬನೇ ಕಾರು ಚಾಲಕ ಇದ್ದಾನೆ. ಹಾಸನದಲ್ಲಿ ರೇವಣ್ಣರಿಗಾಗಲಿ ನಮಗಾಗಲಿ ಕಪ್ಪು ಚುಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತರ ಎಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ಸೂರಜ್ ರೇವಣ್ಣ ಹೇಳಿಕೆ ನೀಡಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago