Featured

ಇದು ಕೇಸ್ ಅಲ್ಲ ಷಡ್ಯಂತರ ಹಾಗೂ ಕುತಂತ್ರ : ಜೈಲಿನಿಂದ ಬಿಡುಗಡೆಯಾದ ಸೂರಜ್ ರೇವಣ್ಣ ಪ್ರತಿಕ್ರಿಯೆ – vishwanews24

ಇದು ಕೇಸ್ ಅಲ್ಲ ಷಡ್ಯಂತರ ಹಾಗೂ ಕುತಂತ್ರ : ಜೈಲಿನಿಂದ ಬಿಡುಗಡೆಯಾದ ಸೂರಜ್ ರೇವಣ್ಣ ಪ್ರತಿಕ್ರಿಯೆ

ಬೆಂಗಳೂರು : ನಮ್ಮ ಕುಟುಂಬದ ವಿರುದ್ಧ ಷಡ್ಯಂತರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ ಎಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದರು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಎಂಎಲ್ಸಿ ಸೂರಜ್ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿ ಆದೇಶ ನೀಡಿತ್ತು. ಹಾಗಾಗಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬಳಿಕ ಅವರು ಮಾತನಾಡಿದರು.

ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ಜೈಲಿನಿಂದ ಬಿಡುಗಡೆ ಬಳಿಕ ಎಂಎಲ್ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದು, ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ.ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ. ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದರು.

ಇದು ಕೇಸ್ ಅಲ್ಲ ಷಡ್ಯಂತರ ಹಾಗೂ ಕುತಂತ್ರ. ಶಿವಕುಮಾರ್ ಆಪ್ತ ಸಹಾಯಕನಲ್ಲ ಕಾರು ಚಾಲಕನು ಅಲ್ಲ. ನಮಗೆ ಲೋಕೇಶ್ ಅಂತ ಒಬ್ಬನೇ ಕಾರು ಚಾಲಕ ಇದ್ದಾನೆ. ಹಾಸನದಲ್ಲಿ ರೇವಣ್ಣರಿಗಾಗಲಿ ನಮಗಾಗಲಿ ಕಪ್ಪು ಚುಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತರ ಎಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ಸೂರಜ್ ರೇವಣ್ಣ ಹೇಳಿಕೆ ನೀಡಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

10 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

10 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

10 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

14 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

14 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

14 hours ago