ದಕ್ಷಿಣ ಕನ್ನಡ

ಇದು ನಮ್ಮ ಸರಕಾರವೇ ???

ಮಂಗಳೂರು : ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವಂತೆಯೇ ಕರ್ನಾಟಕ ಕರಾವಳಿಯ ಜನತೆ ಇದು ನಿಜಕ್ಕೂ ನಮ್ಮ ಸರಕಾರವೇ ಎಂದು ಪ್ರಶ್ನೆ ಕೇಳುವಂತಾಗಿದೆ.

ಕೊಡಗು ಜಿಲ್ಲೆಯಿಂದ ಆರಂಭಿಸಿ ಉತ್ತರ ಕನ್ನಡ ಜಿಲ್ಲೆಯತನಕ, ಆಸುಪಾಸಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಗಡಿ ಪ್ರದೇಶದ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿದರೆ ಹೆಚ್ಚು ಕಡಿಮೆ ಎಲ್ಲ ಕಡೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಗಳು ಶಾಸಕರಾಗಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಜಾತ್ಯತೀತ ಜನತಾ ದಳ ಸರಕಾರ ರಚನೆ ಮಾಡುತ್ತಿದ್ದು, ನಾವು ಗೆಲ್ಲಿಸಿ ಕಳುಹಿಸಿದ ಶಾಸಕರು ಎನ್ನಲು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಯಾವೊಬ್ಬ ಜೆಡಿಎಸ್ ಶಾಸಕನಿಲ್ಲ.

ಜೆಡಿಎಸ್ ಹಾಗಿರಲಿ ಕಾಂಗ್ರೆಸ್ ಕೂಡ ಮೂರು ಜಿಲ್ಲೆಗಳಲ್ಲಿ ಕೇವಲ ಮೂರು ಶಾಸಕರನ್ನು ಮಾತ್ರ ಹೊಂದಿದೆ. ಮೂರು ಜಿಲ್ಲೆಗಳ 19 ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಇಬ್ಬರು ಸಚಿವರು ಮತ್ತು ಒಬ್ಬ ಶಾಸಕ ಮರು ಆಯ್ಕೆ ಆಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಎಂದೇ ಹೇಳಲಾಗುವ ವೀರಪ್ಪ ಮೊಯ್ಲಿ ಮತ್ತು ಆಸ್ಕರ್ ಫರ್ನಾಂಡಿಸ್ ಅವರ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಖಾತೆಯೇ ತೆರೆದಿಲ್ಲ.

ಮೂರು ಜಿಲ್ಲೆಗಳಲ್ಲಿ ದೇಶಪಾಂಡೆ ಅವರು ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಸಚಿವರಾಗುವುದು ಬಹುತೇಕ ಖಚಿತವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಖಾದರ್ ಸಚಿವರಾಗುತ್ತಾರೆ ಎಂಬುದು ಇದೀಗ ಪ್ರಶ್ನೆಯಾಗಿದೆ ಉಳಿದಿದೆ.

ಜೆಡಿಎಸ್ ವಿಧಾನಪರಿಷತ್ ಸದಸ್ಯರು ಕರಾವಳಿಯ ಜಿಲ್ಲೆಯಿಂದ ಯಾರೂ ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ತಮ್ಮ ಫಾರೂಕ್ ಅವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ ಎಂಬ ವದಂತಿ ದಟ್ಟವಾಗಿ ಹರಡಿದೆ.

ಫಾರೂಕ್ ಬೆಂಗಳೂರಿನಲ್ಲಿ ಉದ್ಯಮ ನಡೆಸುವ ಹಣದ ಥೈಲಿಯ ಉದ್ಯಮಿಯೇ ಹೊರತು ರಾಜಕಾರಣಿಯೂ ಅಲ್ಲ, ಸಮಾಜ ಸೇವಕನೂ ಅಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗೊಂದು ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಫಾರೂಕ್ ನಿಯುಕ್ತಿಗೊಂಡರೆ ಇವರ ಕಾರ್ಯಶೈಲಿ ಹೇಗಿರಬಹುದು ಎಂಬ ಸ್ವಾರಸ್ಯಕರ ಚರ್ಚೆ ಕರಾವಳಿಯಲ್ಲಿ ಆರಂಭವಾಗಿದೆ.

ಕರಾವಳಿಯ ಜನತೆ ಹೇಳಿಕೇಳಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಾಕ್ಷರತೆ ಹೊಂದಿದವರು ಮತ್ತು ಉನ್ನತ ಶಿಕ್ಷಣ ಹೊಂದಿದವರೂ ಆಗಿದ್ದರೆ. ಆದರೆ, ಅವರು ಆಯ್ಕೆ ಮಾಡಿ ಕಳುಹಿಸುವ ಲೋಕಸಭಾ ಸದಸ್ಯರು, ಶಾಸಕರ ಶಿಕ್ಷಣ ಮಟ್ಟ, ಅಭಿವೃದ್ಧಿಯ ಕುರಿತಾಗಿ ಅವರ ದೂರದರ್ಶಿ ಚಿಂತನೆಗಳು ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನಕಾರಿಯಾಗಿದೆ.

ಫಾರೂಕ್ ಜಿಲ್ಲಾ ಉಸ್ತುವಾರಿ ಸಚಿವನಾದರೆ ಹೈಸ್ಕೂಲ್ ಮುಗಿಸದ ಲೋಕಸಭಾ ಸದಸ್ಯನೊಂದಿಗೆ ಈ ಉಸ್ತುವಾರಿ ಯಾವ ಮಹಾನ್ ಕಾರ್ಯ ಮಾಡಬಲ್ಲರು ಎಂಬುದನ್ನು ಕಾದು ನೋಡಬೇಕಾಗಿದೆ

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago