ಬೆಂಗಳೂರು,: ಸರ್ಕಾರ ಬಿದ್ದು ಹೋಗುವುದು ಖಚಿತ, ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಇದು ಪ್ರಜಾಪ್ರಭುತ್ವದ ಗೆಲುವು. ಸ್ಪೀಕರ್ ರಾಜೀನಾಮೆ ಬಗ್ಗೆ ಬೇಗ ತೀರ್ಮಾನ ತಗೊಂಡು ಸುಪ್ರೀಂಕೋರ್ಟ್ಗೆ ತನ್ನ ತೀರ್ಪು ತಿಳಿಸಬೇಕು ಅಂತ ಹೇಳಿದ್ದೇನೆ. ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಶಾಸಕರ ಮೇಲೆ ಒತ್ತಡ ಹೇರುವಂತಿಲ್ಲ. ಕುಮಾರಸ್ವಾಮಿ ನಾಳೆ ವಿಶ್ವಾಸಮತ ಪ್ರಸ್ತಾವ ಮಂಡಿಸುತ್ತಾರೆ. ಅವರು ಈಗ ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ಈ ಸರ್ಕಾರ ಬಿದ್ದು ಹೋಗುವುದು ಖಚಿತ ಎಂದು ಹೇಳಿದ್ದಾರೆ.
ರಾಜ್ಯದ ಮೈತ್ರಿ ಸರ್ಕಾರದ ಅಳಿವು–ಉಳಿವಿನ ಪ್ರಶ್ನೆಯನ್ನು ಹುಟ್ಟು ಹಾಕಿದ್ದ ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆಗೆ ಸಂಬಂಧಿಸಿದ ಮಹತ್ವದ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಆದೇಶ ನೀಡಿದೆ. ಸೂಕ್ತ ಕಾಲಮಿತಿಯಲ್ಲಿ ಪ್ರಕರಣವನ್ನು ಇತ್ಯರ್ಥ ಮಾಡುವಂತೆ ಸ್ಪೀಕರ್ಗೆ ಹೇಳಿದೆ. ಇದು ಮಧ್ಯಂತರ ಆದೇಶವಾಗಿದ್ದು, ಪ್ರಕರಣದ ವಿಸ್ತೃತ ವಿಚಾರಣೆಯ ನಂತರ ಅಂತಿಮ ತೀರ್ಪು ನೀಡುವುದಾಗಿಯೂ ತಿಳಿಸಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…