Featured

ಇದು ಮೂರ್ಖ ಸರ್ಕಾರ, ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ : ಕುಮಾರಸ್ವಾಮಿ -Vishwanews24

ಇದು ಮೂರ್ಖ ಸರ್ಕಾರ. ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ : ಕುಮಾರಸ್ವಾಮಿ -Vishwanews24

ಪ್ರಧಾನಿ ನಗುಮೊಗದ ಜಾಹೀರಾತು ಮೂಲಕ ಸರ್ಕಾರ ಜನರ ನೋವನ್ನು ಗೇಲಿ ಮಾಡಿದೆ..

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದು, “ಇದು ಮೂರ್ಖ ಸರ್ಕಾರ. ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ!” ವಾಗ್ದಾಳಿ ನಡೆಸಿದ್ದಾರೆ.

“ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ” ಎಂದಿದ್ದಾರೆ.

ಭಾರತದ ವಾಯು ಸೇನೆಗೆ ಫ್ರಾನ್ಸ್ ನಿಂದ 5ನೇ ಬ್ಯಾಚ್‍ನ ರಫೇಲ್ ಯುದ್ಧ ವಿಮಾನ -Vishwanews24

“ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು” ಎಂದು ಕಿಡಿಕಾರಿದ್ದಾರೆ.

“ಸರ್ಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು” ಎಂದಿದ್ದಾರೆ.

ಮೈಸೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣ : ಮೇ.4ರವರೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ -Vishwanews24

“ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ” ಎಂದು ತಿಳಿಸಿದ್ದಾರೆ.

“ಇದನ್ನು ಈ ಮೂರ್ಖ ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಬೆಡ್‌ ಇಲ್ಲ. ಇದರೊಂದಿಗೆ ಆಕ್ಸಿಜನ್‌ ಕೊರತೆ ಇದೆ. ಔಷಧಿ ಕೂಡಾ ಇಲ್ಲ. ಜನ ಸಾಯುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಕೋಟ್ಯಾಂತರ ರೂ. ಖರ್ಚು ಮಾಡಿ ಜಾಹೀರಾತು ನೀಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು : ಅಧಿಕಾರಿಗಳಿಗೆ ಬಸವರಾಜ ಬೊಮ್ಮಾಯಿ ಸೂಚನೆ -Vishwanews24

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago